Select Your Language

Notifications

webdunia
webdunia
webdunia
webdunia

ಮನೆಗೆ ವಾಪಸಾದ ಕರುಣಾನಿಧಿ

DMK Chief
ಚೆನ್ನೈ , ಶನಿವಾರ, 24 ಡಿಸೆಂಬರ್ 2016 (09:11 IST)
ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಡಿಎಂಕೆ ಪಕ್ಷದ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ( 93) ಶುಕ್ರವಾರ ಆಸ್ಪತ್ರೆಯಿಂದ ಮನೆಗೆ ವಾಪಸ್ಸಾದರು.
ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಶ್ವಾಸಕೋಶ ತೊಂದರೆಯಿಂದಾಗಿ ಡಿಸೆಂಬರ್ 15 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸಿದ್ದರಿಂದ ಕಾವೇರಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಆಸ್ಪತ್ರೆಯ ಕಾರ್ಯಕಾರಿ ನಿರ್ದೇಶಕ ಡಾ. ಎಸ್. ಅರವಿಂದನ್ ತಿಳಿಸಿದ್ದಾರೆ. 
 
ಕರುಣಾನಿಧಿ,ನಿನ್ನೆ ಬೆಳಿಗ್ಗೆ ಟಿವಿಯಲ್ಲಿ ಧಾರಾವಾಹಿ ವೀಕ್ಷಿಸುತ್ತಿರುವ ಚಿತ್ರವನ್ನು ಕಾವೇರಿ ಆಸ್ಪತ್ರೆಯ ಅಡಳಿತ ಮಂಡಳಿ ಪ್ರಕಟಣೆಯಲ್ಲಿ ಹೊರಡಿಸಿತ್ತು.
 
ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಅವರಿಗೆ ಸೂಚಿಸಲಾಗಿದ್ದು ಸಂದರ್ಶಕರನ್ನು ಭೇಟಿಯಾಗದಂತೆ ನಿರ್ದೇಶಿಸಲಾಗಿದೆ. ಶ್ವಾಸನಾಳಕ್ಕಾಗಿರುವ ಸೋಂಕು ಗುಣವಾಗಲು ಇನ್ನಷ್ಟು ದಿನಗಳು ಬೇಕಾಗುತ್ತವೆ. ಆಸ್ಪತ್ರೆಯ ವೈದ್ಯರು ಮತ್ತು ದಾದಿಯರು ಮನೆಯಲ್ಲೇ ಚಿಕಿತ್ಸೆ ಮುಂದುವರೆಸಲಿದ್ದಾರೆ ಎಂದು ಅರವಿಂದನ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

Share this Story:

Follow Webdunia kannada

ಮುಂದಿನ ಸುದ್ದಿ

ಆನಿವಾಸಿ ಭಾರತೀಯರ ಮಗು ಕಸಿದ ನಾರ್ವೆ