Webdunia - Bharat's app for daily news and videos

Install App

ಡಿಎಂಕೆ ಮುಖ್ಯಸ್ಥ ಎಮ್.ಕರುಣಾನಿಧಿ ಡಿಸ್ಚಾರ್ಜ್

Webdunia
ಗುರುವಾರ, 8 ಡಿಸೆಂಬರ್ 2016 (11:26 IST)
ನ್ಯೂಟ್ರಿಷನ್ ಮತ್ತು ಹೈಡ್ರೇಷನ್ ಸಪೋರ್ಟ್‌ಗಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಒಂದು ವಾರದ ಚಿಕಿತ್ಸೆ ಬಳಿಕ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 
 

 
ಔಷಧಿ ಸೇವನೆಯ ಅಡ್ಡಪರಿಣಾಮದಿಂದಾದ ಅಲರ್ಜಿಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ 93ರ ಹರೆಯದ ಕರುಣಾನಿಧಿ ಡಿಸೆಂಬರ್ 1 ರಂದು ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.
 
ಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕಾವೇರಿ ಆಸ್ಪತ್ರೆ ಕಾರ್ಯಕಾರಿ ನಿರ್ದೇಶಕ ಡಾಕ್ಟರ್.ಎಸ್. ಅರವಿಂದನ್ ಹೇಳಿದ್ದಾರೆ.
 
ಅವರಿಗೆ ವಿಶ್ರಾಂತಿ ಸೂಚಿಸಲಾಗಿದ್ದು, ಮನೆಯಲ್ಲಿ ಅವರಿಗೆ ಅಗತ್ಯ ವೈದ್ಯಕೀಯ ಮತ್ತು ಶುಶ್ರೂಷೆ ಮುಂದುವರಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ. ಅನಾರೋಗ್ಯದಿಂದಾಗಿ ಕಳೆದ ಒಂದು ತಿಂಗಳಿನಿಂದ ಕರುಣಾನಿಧಿಯವರು ಸಾರ್ವಜನಿಕ ಚಟುವಟಿಕೆಗಳಿಂದ ದೂರವುಳಿದಿದ್ದರು.
 
ಅವರಿಗೆ ವಿಶ್ರಾಂತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಮತ್ತು ಶುಶ್ರೂಷೆಯನ್ನು ಮನೆಯಲ್ಲೇ ಪಡೆದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. 
 
ಔಷಧಿ ಸೇವನೆಯ ಅಡ್ಡಪರಿಣಾಮದಿಂದಾದ ಅಲರ್ಜಿ ಬಳಿಕ ಕಳೆದೊಂದು ತಿಂಗಳಿಂದ ಕರುಣಾನಿಧಿ ಸಾರ್ವಜನಿಕ ಚಟುವಟಿಕೆಗಳಿಂದ ದೂರವುಳಿದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ: ಬಾಕಿ ಹಣದ ಬಗ್ಗೆ ಬಿಗ್‌ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚರಿಸುವವರ ಗಮನಕ್ಕೆ: ಶನಿವಾರದವರೆಗೂ ರಾತ್ರಿ ಬಂದ್

Plane Crash: ಸ್ವಗೃಹಕ್ಕೆ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಮೃತದೇಹ

ಮುಂದಿನ ಸುದ್ದಿ
Show comments