Webdunia - Bharat's app for daily news and videos

Install App

ಡಿಎಂಕೆ ಕಾರ್ಯ ನಿರ್ವಾಹಕ ಅಧ್ಯಕ್ಷರಾದ ಸ್ಟಾಲಿನ್

Webdunia
ಬುಧವಾರ, 4 ಜನವರಿ 2017 (12:51 IST)
ಜಯಲಲಿತಾ ಸಾವಿನ ಬಳಿಕ ಎಐಡಿಎಂಕೆ ಪಕ್ಷ ಹೊಸ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಿದ ಬೆನ್ನಲ್ಲೆ ಡಿಎಂಕೆ ಕೂಡ ಪಕ್ಷದ ಕಾರ್ಯ ನಿರ್ವಾಹಕ ಅಧ್ಯಕ್ಷರಾಗಿ ಡಿಎಂ ಸ್ಟಾಲಿನ್ ಅವರನ್ನು ಆಯ್ಕೆ ಮಾಡಿದೆ. ಅವರ ತಂದೆ, ಪಕ್ಷದ ವರಿಷ್ಠ ಕರುಣಾನಿಧಿ ವಯೋ ಸಹಜ ಕಾರಣಗಳಿಂದ ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೈಗೊಂಡಿರಬಹುದೆಂದು ಹೇಳಲಾಗುತ್ತಿದೆ. 

 
ಚೆನ್ನೈನಲ್ಲಿ ಬುಧವಾರ ಹಿರಿಯ ನೇತಾರ ಕೆ. ಅನ್ಬಳಗನ್ ನೇತೃತ್ವದಲ್ಲಿ ನಡೆದ ಪಕ್ಷದ ಸರ್ವ ಸದಸ್ಯರ ಸಭೆಯಲ್ಲಿ ನಿರೀಕ್ಷೆಯಂತೆಯೇ ಸ್ಟಾಲಿನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. 
 
ಇತ್ತೀಚಿನ ದಿನಗಳಲ್ಲಿ ಎರಡು ಬಾರಿ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾದ ಪಕ್ಷದ ವರಿಷ್ಠ ಎಮ್. ಕರುಣಾನಿಧಿ ಅಧ್ಯಕ್ಷರಾಗಿಯೇ ಮುಂದುವರೆಯಲಿದ್ದಾರೆ. ಆದರೆ ಅವರಿಗಿರುವ ಅಧಿಕಾರವನ್ನು ಸ್ಟಾಲಿನ್ ಅವರು ಕೂಡ ಹೊಂದಿರಲಿದ್ದಾರೆ. 
 
ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಯಲ್ಲಿಯೇ ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ಕರುಣಾನಿಧಿ ಸಭೆಗೆ ಹಾಜರಾಗಿಲ್ಲವಾದರೂ ತಮ್ಮ ಸಂದೇಶವನ್ನು ಕಳುಹಿಸಿಕೊಟ್ಟಿದ್ದರು. 
 
ಪಕ್ಷದ ಮುಖ್ಯ ಕಾರ್ಯಾಲಯದಲ್ಲಿ ತಮ್ಮನ್ನು ಕಾರ್ಯ ನಿರ್ವಾಹಕ ಅಧ್ಯಕ್ಷರಾಗಿ ಘೋಷಿಸುತ್ತಿದ್ದಂತೆ ಸ್ಟಾಲಿನ್ (63) ತಲೆ ಬಾಗಿ ಅನ್ಬಳಗನ್ ಚರಣಕ್ಕೆರಗಿದರು. ಬಳಿಕ ಮಾತನಾಡಿದ ಅವರು ನಾನು ನನ್ನ ಕೌಟುಂಬಿಕ ಹಿನ್ನೆಲೆಯಿಂದ ಈ ಪದವಿಯನ್ನು ಗಳಿಸಿಲ್ಲ. ಚುನಾವಣೆಯನ್ನೆದುರಿಸಿ ಗೆದ್ದಿದ್ದೇನೆ. ಇದು ಬಹುದೊಡ್ಡ ಜವಾಬ್ದಾರಿ ಮತ್ತು ನಾನಿದನ್ನು ಸ್ವೀಕರಿಸುತ್ತೇನೆ ಎಂದರು. 
 
ಜಯಾ ನಿಧನದ ಬಳಿಕ ತಮಿಳುನಾಡಿನಲ್ಲಿ ಉಂಟಾಗುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಮುಂದಿಟ್ಟು ನೋಡಲಾಗಿ ಸ್ಟಾಲಿನ್ ಹೆಗಲಿಗೆ ಪಕ್ಷದ ಜವಾಬ್ದಾರಿ ಬಿದ್ದಿರುವುದು ಬಹಳ ಮಹತ್ವವನ್ನು ಪಡೆದುಕೊಂಡಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments