ವಿಶ್ವಾಸಮತಯಾಚನೆಗೆ ಸೂಚಿಸದಿದ್ದರೆ ಕಾನೂನು ಹೋರಾಟ: ಸ್ಟ್ಯಾಲಿನ್

Webdunia
ಭಾನುವಾರ, 10 ಸೆಪ್ಟಂಬರ್ 2017 (19:56 IST)
ತಮಿಳುನಾಡಿನಲ್ಲಿ ಮತ್ತೆ ರಾಜಕೀಯ ಮೇಲಾಟಗಳು ಗರಿಗೆದರಿವೆ. ಸಿಎಂ ಪಳನಿಸ್ವಾಮಿಯವರನ್ನ ವಿಶ್ವಾಸಮತಯಾಚನೆಗೆ ರಾಜ್ಯಪಾಲರು ಸೂಚಿಸದಿದ್ದರೆ ಕಾನೂನು ಹೋರಾಟ ನಡೆಸುವುದಾಗಿ ಡಿಎಂಕೆ ಮುಖಂಡ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
 

ಚೆನ್ನೈನಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಸ್ಟಾಲಿನ್ ವಿಶ್ವಾಸಮತ ಯಾಚನೆಗೆ ಸೂಚಿಸುವಂತೆ ಕೋರಿದರು. ಗವರ್ನರ್ ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸ್ಟಾಲಿನ್, 2ನೇ ಬಾರಿಗೆ ರಾಜ್ಯಪಾಲ ವಿದ್ಯಾಸಾಗರ್ ರಾವ್`ಗೆ ಮನವಿ ಸಲ್ಲಿಸಿದ್ದೇನೆ. ಇದೇ ಕೊನೆಯ ಮನವಿ. ವಿಶ್ವಾಸಮತ ಯಾಚನೆಗೆ ಸೂಚಿಸಲು ಒಂದು ವಾರ ಸಮಯ ನೀಡಿದ್ದೇವೆ. ಮುಂದೆ ಕೋರ್ಟ್`ಗೆ ಹೋಗುತ್ತೇವೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಇತ್ತೀಚೆಗೆ ಅಣ್ಣಾಡಿಎಂಕೆಯ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಬಣ ಒಂದಾದ ಬಳಿಕ ಮೂಲೆಗುಂಪಾಗಿದ್ದ ಶಶಿಕಲಾ ಆಪ್ತ ಟಿಟಿವಿ ದಿನಕರನ್ ಬಹಿರಂಗ ಬಂಡಾಯದ ಬಾವುಟ ಹಾರಿಸಿದ್ದರು. ರಾಜ್ಯಪಾಲರನ್ನ ಭೇಟಿ ಮಾಡಿ ನಮ್ಮ ಬೆಂಬಲ ಪಳನಿಸ್ವಾಮಿಗೆ ಇಲ್ಲವೆಂದು ಮನವಿ ತಿಳಿಸಿದ್ದರು. ಹೀಗಾಗಿ, ಪಳನಿಸ್ವಾಮಿ ಸರ್ಕಾರಕ್ಕೆ ಬಹುಮತ ಇಲ್ಲವೆಂಬುದು ಸ್ಟಾಲಿನ್ ವಾದ. ಈ ಮಧ್ಯೆ, ಇಬ್ಬರ ಜಗಳ ಮೂರನೇಯವರಿಗೆ ಲಾಭ ಎಂಬಂತೆ 89 ಶಾಸಕರನ್ನ ಹೊಂದಿರುವ ಡಿಎಂಕೆ, ಕಾಂಗ್ರೆಸ್, ಅಣ್ಣಾಡಿಎಂಕೆಯ ಬಂಡಾಯ ಶಾಸಕರ ಬೆಂಬಲ ಪಡೆದು ಸರ್ಕಾರ ರಚಿಸುವ ಕನಸು ಕಾಣುತ್ತಿದೆ ಎಂಬ ವರದಿಗಳು ಕೇಳಿಬರುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments