Webdunia - Bharat's app for daily news and videos

Install App

ಪುಕ್ಸಟೆ ಬಿರಿಯಾನಿಗಾಗಿ ಹೊಡೆದಾಡಿದ ಡಿಎಂಕೆ ನಾಯಕರು!

Webdunia
ಗುರುವಾರ, 2 ಆಗಸ್ಟ್ 2018 (10:24 IST)
ಚೆನ್ನೈ: ಒಂದೆಡೆ ಡಿಎಂಕೆ ಪಕ್ಷದ ನಾಯಕ ಎಂ ಕರುಣಾನಿಧಿ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಅವರ ಪಕ್ಷದ ಪುಡಾರಿ ನಾಯಕರಿಬ್ಬರು ಬಿರಿಯಾನಿಗಾಗಿ ಹೋಟೆಲ್ ಸಿಬ್ಭಂದಿ ಮೇಲೆ ಹಲ್ಲೆ ನಡೆಸಿ ಸುದ್ದಿಯಾಗಿದ್ದಾರೆ.
 

ಡಿಎಂಕೆ ಯುವ ಬಣದ ನಾಯಕರಾದ ಯುವರಾಜ್ ಮತ್ತು ದಿವಾಕರ್ ಎಂಬಿಬ್ಬರು ಪುಕ್ಸಟೆ ಬಿರಿಯಾನಿ ಕೊಡಲಿಲ್ಲವೆಂದು ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದಲ್ಲದೆ, ಅಂತರ್ಜಾಲದಲ್ಲೂ ಹರಿದಾಡಿ ವೈರಲ್ ಆಗಿತ್ತು.

ಈ ಹಿನ್ನಲೆಯಲ್ಲಿ ಅವರಿಬ್ಬರನ್ನೂ ಪಕ್ಷದಿಂದ ವಜಾಗೊಳಿಸಲು ಕಾರ್ಯಕಾರಿ ಅಧ್ಯಕ್ಷ ಎಂ ಕೆ ಸ್ಟಾಲಿನ್ ಆದೇಶಿಸಿದ್ದಾರೆ. ಪಕ್ಷದ ಘನತೆಗೆ ಕುಂದು ತರುವಂತಹ ಇಂತಹ ನಾಯಕರನ್ನು ಸಹಿಸಲಾಗದು ಎಂದು ಸ್ಟಾಲಿನ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments