Webdunia - Bharat's app for daily news and videos

Install App

ಸನಾತನ ಧರ್ಮವನ್ನು ಡೆಂಗ್ಯೂಗೆ ಹೋಲಿಸಿದ್ದ ಉದಯನಿಧಿಗೆ ಡಿಸಿಎಂ ಪಟ್ಟಕ್ಕೆ ಸ್ವಪಕ್ಷೀಯರಿಂದಲೇ ವಿರೋಧ

Krishnaveni K
ಸೋಮವಾರ, 30 ಸೆಪ್ಟಂಬರ್ 2024 (16:31 IST)
Photo Credit: X
ಚೆನ್ನೈ: ಸನಾತನ ಧರ್ಮ ಎಂದರೆ ಡೆಂಗ್ಯೂ, ಮಲೇರಿಯಾದಂತೆ ಡೇಂಜರ್ ಎಂದು ಅವಹೇಳನ ಮಾಡಿದ್ದ ಉದಯನಿಧಿ ಈಗ ತಮಿಳುನಾಡು ಉಪಮುಖ್ಯಮಂತ್ರಿಯಾಗಿದ್ದಾರೆ.

ಮುಖ್ಯಮಂತ್ರಿ ಸ್ಟಾಲಿನ್ ತಮ್ಮ ಪುತ್ರ ಉದಯನಿಧಿಗೆ ಪಟ್ಟ ಕಟ್ಟಿದ್ದು, ಭವಿಷ್ಯದಲ್ಲಿ ತಮ್ಮ ಉತ್ತರಾಧಿಕಾರಿ ಎಂದು ಸೂಚನೆ ನೀಡಿದ್ದಾರೆ. ಕರುಣಾನಿಧಿ ಬಳಿಕ ಡಿಎಂಕೆ ಪಕ್ಷದ ಚುಕ್ಕಾಣಿ ಹಿಡಿದಿದ್ದ ಸ್ಟಾಲಿನ್ ಬಳಿಕ ಮುಖ್ಯಮಂತ್ರಿಯಾದರು. ಈಗ ಉದಯನಿಧಿಗೆ ಉಪಮುಖ್ಯಮಂತ್ರಿ ಪಟ್ಟಿ ಕಟ್ಟಲಾಗಿದ್ದು, ಮುಂದೆ ಅವರೇ ಡಿಎಂಕೆಯ ಮುಖ್ಯಮಂತ್ರಿ ಅಭ್ಯರ್ಥಿ ಎನ್ನುವುದು ಖಚಿತವಾಗಿದೆ.

ಆದರೆ ಉದಯನಿಧಿಯನ್ನು ಉಪಮುಖ್ಯಮಂತ್ರಿ ಮಾಡಿದ್ದು ಪಕ್ಷದೊಳಗೇ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಉದಯನಿಧಿಗೆ ಸಚಿವ ಸ್ಥಾನ ನೀಡಿದ್ದಕ್ಕೇ ಡಿಎಂಕೆಯ ಕೆಲವು ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಉಪಮುಖ್ಯಮಂತ್ರಿ ಪಟ್ಟ ನೀಡಿರುವುದು ಅಸಮಾಧಾನ ಹೆಚ್ಚುವಂತೆ ಮಾಡಿದೆ.

ತಮಿಳುನಾಡು ಹಾಲಿ ಸಿಎಂ ಸ್ಟಾಲಿನ್ ಆರೋಗ್ಯ ಈಗ ಮೊದಲಿನಷ್ಟು ಚೆನ್ನಾಗಿಲ್ಲ. ಇಂತಹ ಸಂದರ್ಭದಲ್ಲಿಯೇ ಅವರು ಮಗನಿಗೆ ಪಟ್ಟ ಕಟ್ಟಿದ್ದಾರೆ. ಅಂದರೆ ಮುಂದಿನ ದಿನಗಳಲ್ಲಿ ತಮ್ಮ ಆರೋಗ್ಯ ಕೈಕೊಟ್ಟರೆ ಉದಯನಿಧಿಗೇ ಮುಖ್ಯಮಂತ್ರಿ ಪಟ್ಟ ನೀಡುವುದು ಗ್ಯಾರಂಟಿಯಾಗಿದೆ. ಹೀಗಾಗಿ ಕೆಲವು ಹಿರಿಯ ನಾಯಕರು ಅಸಮಾಧಾನಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments