Webdunia - Bharat's app for daily news and videos

Install App

ತಮಿಳುನಾಡು ಸ್ಪೀಕರ್ ಚೇರ್‌ನ್ನು ಮ್ಯೂಸಿಕ್ ಚೇರ್‌ ಆಗಿಸಿದ ಡಿಎಂಕೆ ಶಾಸಕರು

Webdunia
ಶನಿವಾರ, 18 ಫೆಬ್ರವರಿ 2017 (13:07 IST)
ಸ್ಪೀಕರ್​ ಮೈಕುಗಳನ್ನು ಕಿತ್ತೆಸೆದು ಆರ್ಭಟಿಸಿದ ಶಾಸಕರು, ಅವಾಚ್ಯ ಶಬ್ದಗಳಿಂದ ಸ್ಪೀಕರ್‌ರನ್ನು ನಿಂದಿಸಿದ್ದಾರೆ.ಸ್ಪೀಕರ್‌ರನ್ನು ಹೊರಗೆ ತಳ್ಳಿ ಅವರ ಖುರ್ಚಿಯ ಮೇಲೆ ಸರದಿಯಂತೆ ಶಾಸಕರು ಕುಳಿತು ಮ್ಯೂಸಿಕ್ ಚೇರ್ ಮಾಡಿಕೊಂಡು ಪ್ರಜಾಪ್ರಭಉತ್ವಕ್ಕೆ ಮಸಿ ಬಳೆದಿದ್ದಾರೆ. 

ಶಾಸಕರ ಕೂಗಾಟ, ಹೊಡೆದಾಟ, ಬೈಗುಳಗಳ ಅಬ್ಬರಕ್ಕೆ ಸದನದಲ್ಲಿದ್ದ ಕುರ್ಚಿಗಳು ಪುಡಿಪುಡಿಯಾಗಿದ್ದು ಮೇಜುಗಳು ಜಖಂಗೊಂಡಿದ್ದು, ಒಬ್ಬ ಅಟೆಂಡರ್‌ಗೆ ಗಾಯವಾಗಿದೆ. ಅಂಬುಲೆನ್ಸ್‌ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.  
 
ಸದನ ಆರಂಭವಾಗುತ್ತಿದ್ದಂತೆ ಪನ್ನೀರ್ ಸೆಲ್ವಂ ಬಣ, ಡಿಎಂಕೆ, ಹಾಗೂ ಇತರ ವಿಪಕ್ಷಗಳು ರಹಸ್ಯ ಮತದಾನ ನಡೆಸುವಂತೆ ಆಗ್ರಹಿಸಿದ್ದಾರೆ. ಆದರೆ ಅದಕ್ಕೊಪ್ಪದ ಸ್ಪೀಕರ್ ಧ್ವನಿ ಮತದಾನ ನಡೆಸಲು ಆರಂಭಿಸಿದ್ದಾರೆ.
 
ಸಭಾಪತಿಯ ವರ್ತನೆಯಿಂದ ಆಕ್ರೋಶಗೊಂಡ ಶಾಸಕರು ಮೈಕ್ ಕಿತ್ತುಹಾಕಿ ಟೇಬಲ್‌ನ್ನು ಅವರ ಮೇಲೆಯೇ ತಳ್ಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಇದೀಗ ಸಭಾಪತಿ ಧನಪಾಲ್, ಡಿಎಂಕೆ ಮತ್ತು ಎಐಎಡಿಎಂಕೆ ಶಾಸಕರೊಂದಿಗೆ ವಿಶ್ವಾಸಮತಯಾಚನೆ ಕಲಾಪವನ್ನು ಮುಂದೂಡುವ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಮುಂದಿನ ಸುದ್ದಿ
Show comments