Webdunia - Bharat's app for daily news and videos

Install App

ತಮಿಳುನಾಡು ಸರಕಾರದ ಬಿಕ್ಕಟ್ಟಿಗೆ ಮೋದಿ ಸರಕಾರವೇ ಕಾರಣ: ಸ್ಟಾಲಿನ್

Webdunia
ಬುಧವಾರ, 30 ಆಗಸ್ಟ್ 2017 (16:26 IST)
ಎಐಎಡಿಎಂಕೆ ನೇತೃತ್ವದ ತಮಿಳುನಾಡು ಸರಕಾರದ ಬಿಕ್ಕಟ್ಟಿಗೆ ಪ್ರಧಾನಿ ಮೋದಿ ನೇತೃತ್ವದ ಸರಕಾರವೇ ಕಾರಣ ಎಂದು  ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಆರೋಪಿಸಿದ್ದಾರೆ.
ಎಐಎಡಿಎಂಕೆ ಬಣಗಳ ವಿಲೀನಗೊಂಡ ಒಂದು ವಾರದ ನಂತರ ಸ್ಟಾಲಿನ್ ಹೇಳಿಕೆ ನೀಡಿ, ಗುರುವಾರದಂದು 11 ಗಂಟೆಗೆ ನಮ್ಮನ್ನು ಭೇಟಿ ಮಾಡಲು ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಒಪ್ಪಿಕೊಂಡಿದ್ದಾರೆ. ಮೈತ್ರಿಪಕ್ಷಗಳೊಂದಿಗೆ ಅವರನ್ನು ಭೇಟಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. 
 
"ರಾಷ್ಟ್ರಪತಿಯವರನ್ನು ಭೇಟಿಯಾದ ಬಳಿಕವೂ ಕೇಂದ್ರ ಸರಕಾರ ತಮಿಳುನಾಡು ಸರಕಾರದ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಕಾನೂನಿನ ಮೊರೆಹೋಗುತ್ತೇವೆ ಎಂದು ಗುಡುಗಿದ್ದಾರೆ.
 
ಎಐಎಡಿಎಂಕೆ ವಿಲೀನದ ನಂತರ 19 ಮಂದಿ ಶಾಸಕರು ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರ (ಇಪಿಎಸ್) ಸರಕಾರದಿಂದ ತಮ್ಮ ಬೆಂಬಲವನ್ನು ಹಿಂಪಡೆದಿದ್ದರಿಂದ ಸರಕಾರ ಬಹುಮತದ ಕೊರತೆ ಎದುರಿಸುತ್ತಿದೆ.
 
ಬಂಡಾಯ ಶಾಸಕರು ದಿನಕರನ್ ಅವರ ನಿವಾಸದಲ್ಲಿ ಭೇಟಿಯಾಗಿ ಪಳನಿಸ್ವಾಮಿ ಬಣದ ಭಾಗವಾಗಿದ್ದ ಶಾಸಕರು ಕೂಡಾ, ದಿನಕರನ್‌ಗೆ ಬಹಿರಂಗವಾಗಿ ಬೆಂಬಲವನ್ನು ಘೋಷಿಸಬಹುದು ಎನ್ನುವ ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಏತನ್ಮಧ್ಯೆ, ಓ ಪನ್ನೀರ್‌ಸೆಲ್ವಂ ತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ಹಣಕಾಸು, ವಸತಿ, ಗ್ರಾಮೀಣ ವಸತಿ, ವಸತಿ ಅಭಿವೃದ್ಧಿ, ಸ್ಲಂ ಕ್ಲಿಯರೆನ್ಸ್ ಬೋರ್ಡ್, ಟೌನ್ ಯೋಜನೆ, ನಗರಾಭಿವೃದ್ಧಿ, ಚೆನ್ನೈ ಮೆಟ್ರೋಪಾಲಿಟನ್ ಡೆವಲಪ್‌‍ಮೆಂಟ್ ಅಥಾರಿಟಿ ಮತ್ತು ವಸತಿ ನಿಯಂತ್ರಣ ಖಾತೆಗಳನ್ನು ನೀಡಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments