Webdunia - Bharat's app for daily news and videos

Install App

ದೇವರನ್ನು ಮೆಚ್ಚಿಸಲು ಮಗಳಿಗೆ ಈ ರೀತಿ ಮಾಡೋದಾ!?

Webdunia
ಶುಕ್ರವಾರ, 17 ಜೂನ್ 2022 (10:03 IST)
ಅಮರಾವತಿ : ದೇವರನ್ನು ಮೆಚ್ಚಿಸಲು ತಂದೆಯೊಬ್ಬ ತನ್ನ ನಾಲ್ಕು ವರ್ಷದ ಮಗಳಿಗೆ ಕುಂಕುಮ ಹಾಗೂ ಅರಿಶಿಣವನ್ನು ತಿನ್ನಿಸಲು ಯತ್ನಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಆತ್ಮಕೂರು ಪುರಸಭಾ ವ್ಯಾಪ್ತಿಯ ಪೆರಾರೆಡ್ಡಿಪಲ್ಲಿ ಗ್ರಾಮದಲ್ಲಿ ಮೌಢ್ಯ ಆಚರಿಸಲಾಗಿದೆ. ಕಂಡ್ರಾ ವೇಣುಗೋಪಾಲ್ ಬಂಧಿತ ಆರೋಪಿ. ವೇಣುಗೋಪಾಲ್ ದೇವರನ್ನು ಮೆಚ್ಚಿಸಲು ಕುಂಕುಮ ಹಾಗೂ ಅರಿಶಿಣವನ್ನು ತೆಗೆದುಕೊಂಡು ಮನೆಯ ತುಂಬೆಲ್ಲಾ ಹಾಕಿದ್ದಾನೆ.

ನಂತರ ಅಲ್ಲಿಯೇ ಇದ್ದ ತನ್ನ ನಾಲ್ಕು ವರ್ಷದ ಮಗಳಿಗೆ ಕುಂಕುಮಾ ಹಾಗೂ ಅರಿಶಿಣವನ್ನು ತಿನ್ನಲು ಹೇಳಿದ್ದಾನೆ. ಅವಳು ನಿರಾಕರಿಸಿದಾಗ ಬಲವಂತವಾಗಿ ಅರಿಶಿಣ ಹಾಗೂ ಕುಂಕುಮವನ್ನು ಅವಳ ಬಾಯಿಗೆ ಹಾಕಿದ್ದಾನೆ. ಇದರಿಂದಾಗಿ ಆಕೆ ಕಿರುಚುತ್ತಾ ಅಲ್ಲೇ ಕುಸಿದು ಬಿದ್ದಿದ್ದಾಳೆ.

ಇದನ್ನು ಕೇಳಿದ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ, ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ವೇಣುಗೋಪಾಲ್ನನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments