Webdunia - Bharat's app for daily news and videos

Install App

ಅಡುಗೆ ಮಾಡಿಲ್ಲವೆಂದು ಮಗುವಿಗೆ ಹಾಲು ಕುಡಿಸುತ್ತಿದ್ದ ಸೊಸೆಗೆ ಅತ್ತೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 5 ಫೆಬ್ರವರಿ 2019 (09:31 IST)
ಲಕ್ನೋ : ಅಡುಗೆ ಮಾಡುವುದು ತಡ ಮಾಡಿದ್ದಕ್ಕೆ ಅತ್ತೆಯೊಬ್ಬಳು ಮಗುವಿಗೆ ಹಾಲು ಕುಡಿಸುತ್ತಿದ್ದ ಸೊಸೆಯ ಬೆರಳುಗಳನ್ನೇ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.


ಸುಶೀಲಾ ದೇವಿ (65) ಇಂತಹ ದುಷ್ಕೃತ್ಯ ಎಸಗಿದ ಪಾಪಿ ಅತ್ತೆ. ಪ್ರೀತಿ  ಹಲ್ಲೆಗೊಳಗಾದ ಸೊಸೆ. ಸೊಸೆ ಪ್ರೀತಿ ತನ್ನ ಮಗುವಿಗೆ ಹಾಲು ಕುಡಿಸುತ್ತಿದ್ದ ವೇಳೆ ಅತ್ತೆ ಬಂದು ಅಡುಗೆ ಮಾಡುವಂತೆ ಸೊಸೆಗೆ ಹೇಳಿದ್ದಾಳೆ. ಆಗ ಸೊಸೆ ಮಗುವಿಗೆ ಹಾಲು ಕುಡಿಸಿದ ನಂತರ ಅಡುಗೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ಅತ್ತೆ ಚಾಕು ತೆಗೆದುಕೊಂಡು ಸೊಸೆಯ ಬಲಗೈ ಬೆರಳುಗಳನ್ನು ಕತ್ತರಿಸಿ ಪರಾರಿಯಾಗಿದ್ದಾಳೆ.


ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ನೋವಿನಿಂದ ನರಳುತ್ತಿದ್ದ ಸೊಸೆ ಪ್ರೀತಿಯನ್ನು ಆಸ್ಪತ್ರೆಗೆ ದಾಖಲಿಸಿ, ಆರೋಪಿ ಅತ್ತೆ ವಿರುದ್ಧ ಐಪಿಸಿ 323 ಮತ್ತು 504 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments