Select Your Language

Notifications

webdunia
webdunia
webdunia
webdunia

ಪ್ರಿಯಾಂಕಾ ಗಾಂಧಿ ವಾರಣಾಸಿ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯಲು ನಿಜವಾದ ಕಾರಣವೇನು ಗೊತ್ತಾ?

ಪ್ರಿಯಾಂಕಾ ಗಾಂಧಿ ವಾರಣಾಸಿ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯಲು ನಿಜವಾದ ಕಾರಣವೇನು ಗೊತ್ತಾ?
ನವದೆಹಲಿ , ಸೋಮವಾರ, 29 ಏಪ್ರಿಲ್ 2019 (12:18 IST)
ಪ್ರಿಯಾಂಕಾ ಗಾಂಧಿ ವಾರಣಾಸಿ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯಲು ನಿಜವಾದ ಕಾರಣವೇನಂತೆ ಗೊತ್ತಾ?
ನವದೆಹಲಿ : ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧೆಗೆ ಹಿಂದೆ ಸರಿದಿರುವುದಕ್ಕೆ ಕಾರಣವೇನೆಂಬುದನ್ನು ಇದೀಗ ಪೂರ್ವ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.


ಈ ಮೊದಲು ಕಾಂಗ್ರೆಸ್ ನ ಹಿರಿಯ ಮುಖಂಡ ಸ್ಯಾಮ್ ಪಿತ್ರೊಡಾ, ವಾರಣಾಸಿ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಪ್ರಿಯಾಂಕಾ ಗಾಂಧಿ ಅವರ ಸ್ವಂತ ನಿರ್ಧಾರವಾಗಿದೆ ಎಂದು ತಿಳಿಸಿದ್ದಾರೆ.


ಆದರೆ ಇದೀಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ, ತಮ್ಮ ಮೇಲೆ 41 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ಇದೆ. 1 ಸ್ಥಾನಕ್ಕಾಗಿ 41 ಕ್ಷೇತ್ರಗಳಲ್ಲಿ ಪ್ರಚಾರ ನಡೆಸದೆ ಇರಲಾಗುವುದಿಲ್ಲ. ವಾರಣಾಸಿಯಲ್ಲಿ ಪ್ರಧಾನಿ ಮೋದಿ ಅವರ ವಿರುದ್ಧ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ನನ್ನ ನಿರ್ಧಾರವಲ್ಲ, ಅದು ಪಕ್ಷದ ನಿರ್ಧಾರ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

5 ದಿನಗಳ ಕಾಲ ಉಡುಪಿಯಲ್ಲಿ ತಂಗಲಿರುವ ಸಿಎಂ ಹೆಚ್.ಡಿ.ಕೆ. ಕಾರಣವೇನು ಗೊತ್ತಾ?