Webdunia - Bharat's app for daily news and videos

Install App

ರಾಂಗ್ ರೂಟ್ ನಲ್ಲಿ ಬಂದ ಕಾರು ಚಾಲಕ ಟ್ರಾಫಿಕ್ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 21 ಡಿಸೆಂಬರ್ 2018 (07:26 IST)
ನವದೆಹಲಿ : ವ್ಯಕ್ತಿಯೊಬ್ಬ ಕಾರು ಚಲಾಯಿಸಿಕೊಂಡು ರಾಂಗ್ ರೂಟ್ ನಲ್ಲಿ ಬಂದಿದ್ದಲ್ಲದೇ ಇದನ್ನು ತಡೆಯಲು ಬಂದ ಪೊಲೀಸ್ ಸಿಬ್ಬಂದಿಗೆ ಗುದ್ದಿದ ಘಟನೆ ದೆಹಲಿಯ ಸಿಗ್ನೇಚರ್ ಟವರ್ ಚೌಕ್ ಬಳಿ ನಡೆದಿದೆ.

ಸಿಗ್ನೆಚರ್ ಟವರ್ ಚೌಕ್ ಬಳಿ ಎಸ್‍ಯುವಿ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದದನ್ನು ಗಮನಿಸಿದ ಟ್ರಾಫಿಕ್ ಸಿಬ್ಬಂದಿ ತಡೆದು ನಿಲ್ಲಿಸಿ ವಾಹನದ ದಾಖಲಾತಿ ತೋರಿಸಲು ಹೇಳಿದ್ದಾರೆ. ಆಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಚಾಲಕ ಕಾರ್ ರಿವರ್ಸ್ ತೆಗೆದುಕೊಂದು ಪರಾರಿಯಾಗಲು ಯತ್ನಿಸಿದ್ದಾನೆ.

 

ಈ ವೇಳೆ ಆತ ತಪ್ಪಿಸಿಕೊಂಡು ಹೋಗದಿರಲೆಂದು ಪೊಲೀಸ್ ಅಧಿಕಾರಿ ಕಾರಿನ ಎದುರು ನಿಂತು ಬೋನೆಟ್ ಗೆ ಒರಗಿದ್ದಾರೆ. ಆಗ ಆತ ಅಧಿಕಾರಿಯನ್ನು ಎಳೆದುಕೊಂಡು ಕಾರನ್ನು ಸ್ವಲ್ಪ ದೂರದ ತನಕ ತೆಗೆದುಕೊಂಡು ಹೋಗಿದ್ದಾನೆ. ಆದರೂ ಕೊನೆಗೆ ಕಾರಿನ ಚಾಲಕನನ್ನು ನಿಯಂತ್ರಿಸುವಲ್ಲಿ ಪೊಲೀಸ್ ಅಧಿಕಾರಿ ಯಶಸ್ವಿಯಾಗಿದ್ದಾರೆ.

 

ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ ಆರೋಪಿಯ ಕಾರನ್ನು ವಶಕ್ಕೆ ಪಡೆದ ಪೊಲೀಸರು ಆತನ ಮೇಲೆ ಪ್ರಕರಣ ದಾಖಲಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments