Select Your Language

Notifications

webdunia
webdunia
webdunia
webdunia

ಪತಿಯನ್ನು ಬಚಾವ್ ಮಾಡಲು ಹೆಂಡತಿ ಏನ್ ಮಾಡುದ್ಲು ಗೊತ್ತ!

ಪತಿಯನ್ನು ಬಚಾವ್ ಮಾಡಲು ಹೆಂಡತಿ ಏನ್ ಮಾಡುದ್ಲು ಗೊತ್ತ!
ಹೈದರಾಬಾದ್ , ಶನಿವಾರ, 25 ಡಿಸೆಂಬರ್ 2021 (11:29 IST)
ಹೈದರಾಬಾದ್ : ಪತಿಯನ್ನು ಬಚಾವ್ ಮಾಡಲು ಮಹಿಳೆ ಉತ್ತರಾಖಂಡ ಎಸ್ಟಿಎಫ್ ಪೊಲೀಸರಿಗೆ ಮತ್ತು ರಾಜೇಂದ್ರನಗರ ಪೊಲೀಸರ ತಂಡಕ್ಕೆ ಮೆಣಸಿನ ಕಾಯಿ ಪುಡಿ ಎರಚಿರುವ ಘಟನೆ ತೆಲಂಗಾಣದ ಅತ್ತಾಪುರದಲ್ಲಿ ನಡೆದಿದೆ.
 
ಸದ್ಯ ಪೊಲೀಸರ ಕರ್ತವ್ಯಕ್ಕೆ ಅಡ್ಡ ಪಡಿಸಿದ ಮಹಿಳೆ ವಿರುದ್ಧ ಭಾರತೀಯ ದಂಡ ಸಂಹಿತೆಯ(ಐಪಿಸಿ)ಸೆಕ್ಷನ್ 353ರ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

2019 ರ ಕೊಲೆ ಪ್ರಕರಣದ ವಾಟೆಂಡ್ ಕ್ರಿಮಿನಲ್ ಆಗಿದ್ದ ಮಹಿಳೆಯ ಪತಿಯನ್ನು ಬಂಧಿಸಲು ಉತ್ತರಾಖಂಡ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ ಹೈದರಾಬಾದ್ನ ಅತ್ತಾಪುರದ ಸುಲೇಮಾನ್ ನಗರದಲ್ಲಿ ಆರೋಪಿ ವಾಸಿಂ ಪತ್ನಿಯನ್ನು ಭೇಟಿಯಾಗಿರುವ ಬಗ್ಗೆ ಪೊಲೀಸರಿ ಮಾಹಿತಿ ಸಿಕ್ಕಿದೆ.

ಪೊಲೀಸರು ಕಂಡ ಕೂಡಲೇ ಮಹಿಳೆ ಎಸ್ಟಿಎಫ್ ಕಾನ್ಸ್ಟೇಬಲ್ ಚಮನ್ಕುಮಾರ್ ಹಾಗೂ ಸ್ಥಳೀಯ ಕಾನ್ಸ್ಟೇಬಲ್ಗಳ ಕಣ್ಣಿಗೆ ಮೆಣಸಿನ ಕಾಯಿ ಪುಡಿ ಎರಚಿ ಪತಿಗೆ ಪರಾರಿಯಾಗಲು ಸಹಾಯ ಮಾಡಿದ್ದಾಳೆ.

ಅಲ್ಲದೇ ತನಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಕಿರುಚಾಡಿ ನೆರೆಹೊರೆಯವರೆಲ್ಲಾ ಬಂದು ಸೇರುವಂತೆ ದೊಂಬಿ ಎಬ್ಬಿಸಿದ್ದಾಳೆ. ಈ ಮಧ್ಯೆ ಆರೋಪಿ ವಾಸಿಂ ಮನೆಯಿಂದ ಎಸ್ಕೇಪ್ ಆಗಿದ್ದಾನೆ.


Share this Story:

Follow Webdunia kannada

ಮುಂದಿನ ಸುದ್ದಿ

ನೈಟ್ ಕರ್ಫ್ಯೂ ಜಾರಿ?