Webdunia - Bharat's app for daily news and videos

Install App

ಪ್ರೀತಿಸಿ ಮೋಸ ಮಾಡಿದ ಪ್ರೇಯಸಿಗೆ ಪ್ರಿಯತಮ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 22 ಡಿಸೆಂಬರ್ 2018 (06:44 IST)
ಒಡಿಶಾ : ಪ್ರೀತಿಸಿದವನ ಬಿಟ್ಟು ಬೇರೆಯವರ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದಕ್ಕೆ ಕೋಪಗೊಂಡ ಪ್ರಿಯತಮ ಪ್ರೇಯಸಿಯ ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ.


ಸಸ್ಮಿತಾ ಬಿಸ್ವಾಲ್ ಪ್ರಿಯತಮನಿಂದಲೇ ಕೊಲೆಯಾದ ಯುವತಿ. ಯುಧಿಸ್ಠಿರ್ ಕೊಲೆ ಮಾಡಿದ ಆರೋಪಿ. ಆರೋಪಿ ಯುಧಿಸ್ಠಿರ್ ಪ್ರೇಯಸಿಯ ಮನೆ ಸಮೀಪದ ಏರಿಯಾದಲ್ಲಿ ವಾಸಿಸುತ್ತಿದ್ದು, ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಆಕೆಗೆ ಬೇರೆಯವರ ಜೊತೆ ಮದುವೆ ನಿಶ್ಚಯವಾಗಿತ್ತು.ಇದರಿಂದ ಕೋಪಗೊಂಡಿದ್ದ ಆರೋಪಿ ಯುಧಿಸ್ಠಿರ್ ಭುವನೇಶ್ವರ ಹೊರವಲಯದಲ್ಲಿರುವ ಚಂದಕ ಅರಣ್ಯ ನೋಡಲು ಕರೆದುಕೊಂಡು ಹೋಗಿ ಆಕೆಯ ಗಂಟಲನ್ನು ಸೀಳಿ ತಲೆಯನ್ನು ಕತ್ತರಿಸಿ ಕೊಲೆ ಮಾಡಿದ್ದಾನೆ.


ಡಿಸೆಂಬರ್ 13 ರಂದು ಸಸ್ಮಿತಾ ಬಿಸ್ವಾಲ್ ನಾಪತ್ತೆಯಾಗಿದ್ದು, ಆಕೆಯ ಕುಟುಂಬದವರು ಪೊಲೀಸರಿಗೆ ನಾಪತ್ತೆಯ ದೂರು ನೀಡಿದ್ದರು. ತಲೆ ಇಲ್ಲದ ಯುವತಿಯ ದೇಹವೊಂದು ಭುವನೇಶ್ವರ ಹೊರವಲಯದಲ್ಲಿರುವ ಚಂದಕ ಅರಣ್ಯ ವಿಭಾಗದಲ್ಲಿ ಪತ್ತೆಯಾಗಿದ್ದು, ತನಿಖೆಯ ವೇಳೆ ಮೃತ ಯುವತಿ ಸಸ್ಮಿತಾ ಬಿಸ್ವಾಲ್ ಎಂಬುದಾಗಿ ತಿಳಿದುಬಂದಿದೆ. ಈ ಬಗ್ಗೆ  ಪ್ರಿಯತಮ ಯುಧಿಸ್ಠಿರ್ ನನ್ನು ಬಂಧಿಸಿ ವಿಚಾರಣೆ ಮಾಡಿದಾಗ ಸತ್ಯಾಂಸ ಬಾಯಿಬಿಟ್ಟಿದ್ದಾನೆ. ಸದ್ಯಕ್ಕೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

121 ಬಾಂಗ್ಲಾದೇಶಿ ಪ್ರಜೆಗಳ ಬಂಧನ, ಮುಂದುವರೆದ ವಿಚಾರಣೆ

ಮದುವೆ ಮಂಟಪದಲ್ಲಿ ಈ ರೀತಿ ಮಾಡಿದ್ರೆ ಗಂಡುಮಕ್ಕಳು ಯಾವಾ ಧೈರ್ಯದಲ್ಲಿ ಮದುವೆ ಆಗೋದು ಹೇಳಿ

DK Shivakumar: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಡಿಕೆ ಶಿವಕುಮಾರ್: 25 ಲಕ್ಷ ಕೊಟ್ಟಿದ್ದೆ ತಪ್ಪೇನು ಎಂದ ಡಿಸಿಎಂ

HD Kumaraswamy: ರಾಮನಗರ ಜಿಲ್ಲೆ ಹೆಸರು ಬದಲಿಸಿದ್ದರಿಂದ ಡಿಕೆಶಿ ಜಮೀನು ಬೆಲೆ ಹೆಚ್ಚಾಗಬಹುದು: ಕುಮಾರಸ್ವಾಮಿ

Mysore Sandal Soap: ವಿರೋಧದ ಬೆನ್ನಲ್ಲೇ ತಮನ್ನಾ ಆಯ್ಕೆ ಹಿಂದಿನಿ ಕಾರಣ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಮುಂದಿನ ಸುದ್ದಿ
Show comments