Webdunia - Bharat's app for daily news and videos

Install App

ಪತ್ನಿ, ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ವ್ಯಕ್ತಿಗೆ ಆಮೇಲೆ ಆಗಿದ್ದೇನು ಗೊತ್ತಾ?

Webdunia
ಮಂಗಳವಾರ, 22 ಜನವರಿ 2019 (08:55 IST)
ಗುಜರಾತ್ : ಕ್ಷುಲಕ ಕಾರಣಕ್ಕೆ ಪತ್ನಿ ಮತ್ತು ಇಬ್ಬರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ವ್ಯಕ್ತಿ ಬಳಿಕ ತಾನೂ ರೈಲಿಗೆ ಜಿಗಿದು ಮೃತಪಟ್ಟಿರುವ ಘಟನೆ ಗುಜರಾತಿನ ವಡೋದರದಲ್ಲಿ ನಡೆದಿದೆ.

ಬಲವಂತ್ ರಾಯ್ಪಾಸಿನ್ ಸಿಂಧಾಲ್ ಪತ್ನಿ, ಮಕ್ಕಳ ಮೇಲೆ ಹಲ್ಲೆ ಮಾಡಿ ಮೃತಪಟ್ಟ ವ್ಯಕ್ತಿ. ಮದುವೆಯಾಗಿ ಹದಿನೆಂಟು ವರ್ಷ ಕಳೆದರೂ ಈ ದಂಪತಿಗಳು ಪದೇಪದೇ ಕ್ಷುಲಕ ಕಾರಣಕ್ಕೆ ಜಗಳವಾಡುತ್ತಿದ್ದರು. ಇದರಿಂದ ಕೋಪಗೊಂಡಿದ್ದ ಬಲವಂತ್ ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಆ ವೇಳೆ ತಾಯಿಯ ರಕ್ಷಣೆಗೆಂದು ಬಂದ ಇಬ್ಬರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಈ ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆಯೇ ಪತ್ನಿ ಮೃತಪಟ್ಟಿದ್ದಾರೆ. ಹಾಗೇ  ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

 

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು  ಆರೋಪಿಯ   ಹುಡುಕಾಟ ನಡೆಸುತ್ತಿದ್ದಾಗ ಆರೋಪಿ ಬಲವಂತ್ ನ ಶವ ಕರ್ಜನ್ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾಗಿದೆ. ಸ್ಥಳದಲ್ಲಿ ಪತ್ತೆಯಾದ ಫೋನ್, ಸಿಮ್ ಕಾರ್ಡ್, ಟ್ಯಾಟೊ ಮತ್ತು ಬೈಸಿಕಲ್ ಮೂಲಕ ಆ ಶವ  ಆರೋಪಿ ಬಲವಂತ್ ಎಂಬುದಾಗಿ ಗುರುತಿಸಲಾಗಿದೆ. ಆತ ಸ್ಥಳೀಯ ರೈಲಿನ ಮುಂದೆ ಜಿಗಿದು ಮೃತಪಟ್ಟಿದ್ದಾನೆ ಎನ್ನಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಮುಂದಿನ ಸುದ್ದಿ
Show comments