Webdunia - Bharat's app for daily news and videos

Install App

ಪತ್ನಿ ಪರ ಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 7 ಮಾರ್ಚ್ 2019 (06:51 IST)
ಚೆನ್ನೈ : ಪತ್ನಿ ಪರ ಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಗೊಂಡ ಪತಿಯೊಬ್ಬ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯನ್ನು ಕೊಂದು ಪೀಸ್ ಪೀಸ್ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.


ಗಂಗಾ ಮೃತ ದುರ್ದೈವಿ, ರಾಜಶೇಖರ್ ಪತ್ನಿಯನ್ನು ಕೊಂದ ಪಾಪಿ ಪತಿ. ಚಾಲಕನಾಗಿ ಕೆಲಸ ಮಾಡುತ್ತಿದ್ದ ಈತ ಗಂಗಾಳನ್ನು ಪ್ರೀತಿಸಿ ಮದುವೆಯಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ  ಆಗಾಗ ಬೇರೆ ಬೇರೆ ಕಡೆ ಟ್ರಾವೆಲ್ ಮಾಡುತ್ತಿದ್ದ ಈತನಿಗೆ ಪತ್ನಿ ಬೇರೆ ವ್ಯಕ್ತಿಯ ಜೊತೆ ಸಂಬಂಧವಿಟ್ಟುಕೊಂಡಿದ್ದಾಳೆ  ಎಂಬ ಅನುಮಾನವಿತ್ತು. ಈ ವಿಚಾರಕ್ಕೆ ಆಗಾಗ ಜಗಳವಾಡುತ್ತಿದ್ದ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಬೇರೆ ಬೇರೆಯಾಗಿ ವಾಸಿಸುತ್ತಿದ್ದರು.


ಆದರೆ ಮಾರ್ಚ್ 1 ರಂದು ಗಂಗಾ ಅಂಗಡಿಯಿಂದ ಹಾಲನ್ನು ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದಾಗ ರಾಜಶೇಖರ್ ಮತ್ತು ಎಂಟು ಮಂದಿ ಗೆಳೆಯರು ಸೇರಿ ಆಕೆಯ ಮೇಲೆ ಹಲ್ಲೆ ಮಾಡಿ ಪೀಸ್ ಪೀಸ್ ಮಾಡಿ ಕೊಲೆ ಮಾಡಿದ್ದಾರೆ. ಈ ಕೊಲೆಯ ಬಗ್ಗೆ ಮಾಹಿತಿ ತಿಳಿದ ಮಧುಕ್ಕರೈ ಪೊಲೀಸರು ತನಿಖೆ ನಡೆಸಿದಾಗ ಆರೋಪಿ ಪತಿ ಸಿಕ್ಕಿಹಾಕಿಕೊಂಡಿದ್ದಾನೆ. ಈ ಕುರಿತು ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಾಜಶೇಖರ್ ಮತ್ತು ಆತನ ಸ್ನೇಹಿತರನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments