Webdunia - Bharat's app for daily news and videos

Install App

ಕಳ್ಳತನದ ಆರೋಪಕ್ಕೆ ಹೆದರಿದ ದಂಪತಿ ರೈಲಿನಲ್ಲಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 22 ಆಗಸ್ಟ್ 2018 (14:51 IST)
ನಾಗ್ಪುರ: ಕಳ್ಳತನದ ಆರೋಪಕ್ಕೆ ಅಂಜಿ ಗಂಡ-ಹೆಂಡತಿ ಇಬ್ಬರೂ ಸಿಹಿತಿಂಡಿಯಲ್ಲಿ ವಿಷ ಬೆರೆಸಿಕೊಂಡು ತಿಂದ ಘಟನೆಯೊಂದು ನಡೆದಿದೆ.

ಕನ್ಯಾಕುಮಾರಿ ಜಿಲ್ಲೆಯ ಅಂಜುಗ್ರಾಮಂನಲ್ಲಿ ವಾಸವಿರುವ ರಾಜ್‌ಕುಮಾರ್‌ ಆರ್ಮುಗಂ(46) ಹಾಗೂ ಪತ್ನಿ ಸಿವಸೆಲ್ವಿ(38) ಮೇಲೆ ವಂಚನೆ, ಕಳ್ಳತನ ಆರೋಪ ಮಾಡಲಾಗಿತ್ತು. ಈ ಸಂಬಂಧ ಅಲ್ಲಿನ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಜೆ ಸುಭಾಷ್‌ ಪಿಳ್ಳೈ ಎಂಬವರು ರಾಜ್‌ಕುಮಾರ್‌ ಆರ್ಮುಗಂ ದಂಪತಿ ನೆರೆ ಮನೆಯ ವೈದ್ಯರು ಹಾಗೂ ಇನ್ನಿತರ ಬಳಿಯಿಂದ ಹಣ ಪಡೆದು ವಂಚಿಸಿದ್ದಾರೆ ಎಂದು ದೂರು ನೀಡಿದ್ದರು.


ಕಳ್ಳತನದ ಆರೋಪದಲ್ಲಿ ಪೊಲೀಸರ ವಿಚಾರಣೆ ಇತ್ಯಾದಿ ಪ್ರಕ್ರಿಯೆಗೆ ಹೆದರಿ ದಂಪತಿ ರೈಲಿನಲ್ಲಿ ಪ್ರಯಾಣಿಸುವಾಗ ಸಿಹಿತಿಂಡಿಗೆ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ವೆಲ್ಲೂರಿನಿಂದ ವಾರಾಣಸಿಗೆ ಪ್ರಯಾಣಿಸುತ್ತಿದ್ದ ದಂಪತಿಗಳು, 2.5ಕೋಟಿ ರೂ. ನಗದು, 10-12ಕೆಜಿ ಚಿನ್ನವನ್ನು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದಾರೆ ಎಂದು ರೈಲ್ವೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ನಾಗ್ಪುರ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ರೈಲು ಹತ್ತಿದ್ದು, ದಂಪತಿಯನ್ನು ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಬ್ಯಾಗ್‌ ಹಾಗೂ ವಸ್ತುಗಳನ್ನು ತಪಾಸಣೆ ನಡೆಸಿದ್ದಾರೆ.

ಆದರೆ ದಂಪತಿಯ ಲಗೇಜ್‌ನಲ್ಲಿ ಕಳ್ಳತನದ ಯಾವುದೇ ವಸ್ತುಗಳು ಸಿಕ್ಕಿಲ್ಲ. ಇಷ್ಟಾಗಿಯೂ ದಂಪತಿ ಮೇಲೆ ಪೊಲೀಸರು ನಿಗಾ ಇರಿಸಿದ್ದರು. ಇದರಿಂದ ತೀವ್ರ ಮನ ನೊಂದ ದಂಪತಿಗಳು, ಸಿಹಿತಿಂಡಿಯಲ್ಲಿ ವಿಷ ಬೆರೆಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments