Webdunia - Bharat's app for daily news and videos

Install App

ಮಗು ನೀರಲ್ಲಿ ಮುಳುಗಿ ಸಾವನಪ್ಪಿದ್ದನ್ನು ಕಂಡು ತಂದೆ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 24 ಡಿಸೆಂಬರ್ 2018 (07:15 IST)
ಕೊಯಮತ್ತೂರು : 2 ವರ್ಷದ ಮಗ ಆಕಸ್ಮಿಕವಾಗಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನಪ್ಪಿದ್ದನ್ನು ಕಂಡು  ಆತನ  ತಂದೆ ಕೂಡ ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.


ತಂದೆ ಮಣಿಕಂದನ್ (32) ಹಾಗೂ  ಮಗ ದೇಜಶ್ವಿನ್ (2 ) ಮೃತಪಟ್ಟ ದುರ್ದೈವಿಗಳು.  ತಂದೆ ಮಣಿಕಂದನ್ ತನ್ನ 5 ವರ್ಷದ ಮಗಳ ಜೊತೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದರು. ಆಗ ಅಲ್ಲೆ ಆಡುತ್ತಿದ್ದ 2ವರ್ಷದ ಮಗ ದೇಜಶ್ವಿನ್ ನೆಲಮಟ್ಟದಲ್ಲಿದ್ದ ತೆರೆದ ನೀರಿನ ಟ್ಯಾಂಕ್‌ ಗೆ ಬಿದ್ದು ಸಾವನಪ್ಪಿದ್ದಾನೆ. ಮಗ ಕಾಣದಿದ್ದಾಗ ಹುಡುಕಾಡಿದ ತಂದೆಗೆ ಮಗನ ಶವ ನೀರಿನ ಟ್ಯಾಂಕ್‌ನಲ್ಲಿ ತೇಲುತ್ತಿರುವುದು ಕಾಣಿಸಿದೆ. ಇದರಿಂದ ಆಘಾತಕ್ಕೊಳಗಾದ ಮಣಿಕಂದನ್ ರೂಂಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ತಂದೆ ಕಾಣಿಸದಿದ್ದಾಗ ಮಗಳು ಮಲಗಿದ್ದ  ತಾಯಿಯನ್ನು ಎಬ್ಬಿಸಿದ್ದಾಳೆ. ಆಗ ತಾಯಿ ರೂಂ ಬಾಗಿಲು ತೆಗೆಯಲಾಗದೆ ಕಿಟಕಿಯಿಂದ ನೋಡಿದಾಗ ಪತಿ ನೇಣಿನ ಕುಣಿಕೆಯಲ್ಲಿ ತೂಗುತ್ತಿರುವುದು ಕಾಣಿಸಿದೆ. ನಂತರ ಆಕೆ ಕಿರುಚಾಡಿದ್ದು, ಇದನ್ನು ಕೇಳಿ ಓಡಿಬಂದ ನೆರೆಹೊರೆಯವರು ಮಗುವನ್ನು ಹುಡುಕಿದಾಗ ಮಗುವಿನ ಶವ ನೀರಿನ ಟ್ಯಾಂಕಿನಲ್ಲಿ ಕಂಡುಬಂದಿದೆ.


ಈ ದಂಪತಿಗೆ ಮದುವೆಯಾಗಿ 6 ವರ್ಷವಾಗಿತ್ತು. ತನ್ನ ಇಬ್ಬರು ಮಕ್ಕಳು ಹಾಗೂ ಗಂಡನ ಜೊತೆ ಸುಖದ ಸಂಸಾರ ನಡೆಸಿದ್ದ ತಾಯಿ ಪೂವಿತಾ ಇದೀಗ ಪತಿ ಮತ್ತು ಮಗುವನ್ನು ಕಳೆದುಕೊಂಡು ರೋದಿಸುತ್ತಿರುವುದನ್ನು ನೋಡಿದರೆ ಎಂತವರ ಮನಸ್ಸು ಕೂಡ ಕರಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments