Webdunia - Bharat's app for daily news and videos

Install App

ಸಂಕ್ರಾಂತಿ ಹಬ್ಬಕ್ಕೆ ಹಣ ಕೊಡಲಿಲ್ಲವೆಂದು ಪತಿ ಪತ್ನಿಗೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 15 ಜನವರಿ 2019 (09:50 IST)
ಚೆನ್ನೈ : ಸಂಕ್ರಾಂತಿ ಹಬ್ಬಕ್ಕೆ ಪತ್ನಿ ಹಣ ಕೊಡಲಿಲ್ಲ ಎಂದು ಕೋಪಗೊಂಡ ಪತಿ  ಆಕೆ ಮಲಗಿದ್ದ ವೇಳೆ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ತಮಿಳುನಾಡಿನ ಒಸಿಲಿಂಪಟ್ಟಿ ಗ್ರಾಮದ ಮಧುರೈ ಜಿಲ್ಲೆಯಲ್ಲಿ ನಡೆದಿದೆ.


ರಸಾತಿ(65) ಕೊಲೆಯಾದ ದುರ್ದೈವಿ. ರಾಮರ್(70) ಪತ್ನಿಯನ್ನೇ ಕೊಂದ ಪಾಪಿ ಪತಿ. ರಸಾತಿ ಕೇರಳದಲ್ಲಿ ದಿನಕೂಲಿ ಕೆಲಸ ಮಾಡಿಕೊಂಡು ತಿಂಗಳಿಗೆ ಒಮ್ಮೆ ಮನೆಗೆ ಬರುತ್ತಿದ್ದಳು. ಅಲ್ಲದೆ ತನ್ನ ದುಡಿಮೆಯಲ್ಲಿಯೇ ಕುಟುಂಬವನ್ನು ಸಾಕುತ್ತಿದ್ದಳು. ಆದರೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ತಮಿಳುನಾಡು ಸರ್ಕಾರ ದಿನಕೂಲಿ ಕಾರ್ಮಿಕರಿಗೆ ನೀಡಿದ 1 ಸಾವಿರ ರೂ. ಹಣದಲ್ಲಿ ಅರ್ಧ ಅಂದ್ರೆ 500 ರೂ. ತನಗೆ ಕೊಡು ಎಂದು ರಾಮರ್ ಪತ್ನಿಯನ್ನು ಕೇಳಿದ್ದಾನೆ. ಇದಕ್ಕೆ ಆಕೆ ಒಪ್ಪದಿದ್ದಾಗ ಕೋಪಗೊಂಡ ಆತ ರಾತ್ರಿ ಪತ್ನಿ ನಿದ್ರೆ ಮಾಡುತ್ತಿದ್ದ ವೇಳೆ  ಆಕೆಯ ಕತ್ತನ್ನು ಕೊಯ್ದು ಕೊಲೆ ಮಾಡಿದ್ದಾನೆ.


ಈ ಘಟನೆಯ ಬಳಿಕ ಆರೋಪಿ ರಾಮರ್ ತಾನೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ವಿಷಯ ತಿಳಿಸಿ ಶರಣಾಗಿದ್ದಾನೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು  ಮಹಿಳೆಯ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆಂದು ಕಳುಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments