Webdunia - Bharat's app for daily news and videos

Install App

ಮಾಂಸಹಾರ ಅಡುಗೆ ಮಾಡದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 29 ನವೆಂಬರ್ 2023 (09:56 IST)
ಆರೋಪಿ ಪತಿ ಲಿಯಾಕತ್ ತನ್ನ ಪತ್ನಿಗೆ ಮಟನ್ ಮಾಡಿಕೊಡುವಂತೆ ಕೋರಿದ್ದಾನೆ. ಆದರೆ, ಮನೆಯಲ್ಲಿ ಮಟನ್ ಮಾಡುವ ಮಸಾಲೆ ವಸ್ತುಗಳಿಲ್ಲವಾದ್ದರಿಂದ ಮಟನ್ ಮಾಡಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡು  ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.  ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.
 
ಕುಡಿದ ಮತ್ತಿನಲ್ಲಿದ್ದ ಪತಿ ಮಹಾಶಯನೊಬ್ಬ ತಾನು ಕೋರಿದರೂ ಪತ್ನಿ ಮಟನ್ ಮಾಡಲಿಲ್ಲ ಎನ್ನುವ ಕಾರಣಕ್ಕೆ ಆಕೆಯನ್ನು ಸಜೀವವಾಗಿ ದಹಿಸಿದ ಘಟನೆ ಮಧ್ಯಪ್ರದೇಶದ ಜಬಲ್ಪುರ್ ಜಿಲ್ಲೆಯಲ್ಲಿ ನಡೆದಿದೆ.  
 
ಬೆಂಕಿಯಿಂದ ಗಾಯಗೊಂಡ 25 ವರ್ಷದ ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.  
 
ಜಬಲ್‌ಪುರ್‌ನ ಚಾಂದಿನಿ ಚೌಕ್ ಪ್ರದೇಶದಲ್ಲಿ ದಂಪತಿಗಳು ವಾಸಿಸುತ್ತಿದ್ದರು. ಆಕೆಯ ಪತಿ ಲಿಯಾಕತ್ ಖಾನ್ ಇದೊಂದು ಅಕಸ್ಮಿಕ ಘಟನೆ ಎಂದು ಪ್ರಕರಣವನ್ನು ಮುಚ್ಚಿಡಲು ಪ್ರಯತ್ನಿಸಿದನಾದರೂ ಪೊಲೀಸರ ವಿಚಾರಣೆ ವೇಳೆ ತಾನೇ ಪತ್ನಿಗೆ ಬೆಂಕಿ ಹಚ್ಚಿರುವುದಾಗಿ ಒಪ್ಪಿಕೊಂಡಿದ್ದಾನೆ.  
 
ಏತನ್ಮಧ್ಯೆ, ಪತ್ನಿ ಶಬನಮ್ ವೈದ್ಯರಿಗೆ ಪತಿಯ ಹೇಯ ಕೃತ್ಯದ ಬಗ್ಗೆ ಮಾಹಿತಿ ನೀಡಿದಾಗ, ಆರೋಪಿ ಪತಿ ಆಸ್ಪತ್ರೆಯಿಂದ ಪರಾರಿಯಾಗಲು ಪ್ರಯತ್ನಿಸಿದ. ಆದರೆ, ಆಸ್ಪತ್ರೆಯ ಸಿಬ್ಬಂದಿ ಮತ್ತು ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments