ಕಾಲೇಜಿನ ಆವರಣದಲ್ಲಿ ಸ್ಯಾನಿಟರಿ ಪ್ಯಾಡ್ ಸಿಕ್ಕಿದ್ದಕ್ಕೆ ಶಿಕ್ಷಕಿಯರು ವಿದ್ಯಾರ್ಥಿನಿಯರಿಗೆ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 16 ಫೆಬ್ರವರಿ 2020 (07:30 IST)
ಗಾಂಧಿ ನಗರ : ಕಾಲೇಜಿನ ಆವರಣದಲ್ಲಿ ಸ್ಯಾನಿಟರಿ ಪ್ಯಾಡ್ ಕಂಡುಬಂದ ಹಿನ್ನಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಋತುಸ್ರಾವ ಆಗಿದೆಯೇ ಇಲ್ಲವೇ ಎಂದು ತಿಳಿಯಲು ಶಿಕ್ಷಕಿಯರು ವಿದ್ಯಾರ್ಥಿನಿಯರ ಒಳ ಉಡುಪು ತೆಗೆಸಿ ಪರೀಕ್ಷಿಸಿದ ಘಟನೆ ಗುಜರಾತ್ ನ ಕಛ್ ಜಿಲ್ಲೆಯ ಭುಜ್ ನ  ಶ್ರೀ ಸಹಜಾನಂದ್ ಗರ್ಲ್ಸ್ ಇನ್ ಸ್ಟಿಟ್ಯೂಟ್ ನಲ್ಲಿ ನಡೆದಿದೆ.


ಈ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಮುಟ್ಟಿನ ವೇಳೆ ಹಾಸ್ಟೆಲ್ ಅಡುಗೆ ಮನೆ, ಆವರಣದಲ್ಲಿರುವ ದೇವಸ್ಥಾನಕ್ಕೆ ಹೀಗುವಂತಿಲ್ಲ. ಹಾಗೇ ಬೇರೆ ವಿದ್ಯಾರ್ಥಿಗಳ ಜೊತೆ ಬೆರೆಯುವಂತಿಲ್ಲ ಎಂಬ ನಿಯಮವಿದೆ. ಈ ಕಾರಣಕ್ಕೆ ವಿದ್ಯಾರ್ಥಿನಿಯರು ತಮಗೆ ಋತುಸ್ರಾವವಾದ ವಿಚಾರವನ್ನು ಮುಚ್ಚಿಡುತ್ತಿದ್ದರು.


ಆದರೆ ಕಾಲೇಜಿನ ಆವರಣದಲ್ಲಿ ಸ್ಯಾನಿಟರಿ ಪ್ಯಾಡ್ ಕಂಡುಬಂದ ಹಿನ್ನಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಋತುಸ್ರಾವ ಆಗಿದೆಯೇ ಇಲ್ಲವೇ ಎಂದು ತಿಳಿಯಲು ಶಿಕ್ಷಕಿಯರು ಶೌಚಾಲಯಕ್ಕೆ ಕರೆದುಕೊಂಡು ಹೋಗಿ ವಿದ್ಯಾರ್ಥಿನಿಯರ ಒಳ ಉಡುಪು ತೆಗೆಸಿ ಪರೀಕ್ಷಿಸಿದ್ದಾರೆ. ಅಲ್ಲದೇ ಪ್ರತಿಭಟನೆ ನಡೆಸಿದರೆ ಕಾಲೇಜಿನಿಂದ ಹೊರಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ತಿಳಿದ ಗುಜರಾತ್ ರಾಜ್ಯ ಮಹಿಳಾ ಆಯೋಗ ಸಮಿತಿ ರಚಿಸಿ ವಿದ್ಯಾರ್ಥಿನಿಯರಿಂದ ಮಾಹಿತಿ ಕಲೆಹಾಕಿದ್ದು, ಈ ಘಟನೆಯ ಬಗ್ಗೆ ವಿವರಣೆ ನೀಡುವಂತೆ ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments