Webdunia - Bharat's app for daily news and videos

Install App

ವಿವಾಹವಾಗಲ್ಲ ಎಂದ ಯುವತಿಗೆ ಯುವಕ ಏನ್ ಮಾಡ್ದ ಗೊತ್ತಾ?

Webdunia
ಸೋಮವಾರ, 18 ಡಿಸೆಂಬರ್ 2023 (13:29 IST)
ಕಾಲೇಜು ಓದುವುದನ್ನು ಅರ್ಧಕ್ಕೆ ನಿಲ್ಲಿಸಿದ್ದ ಆರೋಪಿ , ಯುವತಿಯ ನೆರೆಮನೆಯಲ್ಲಿ ವಾಸವಾಗಿದ್ದ. ಪ್ರತಿನಿತ್ಯ ಅವರ ಮನೆಗೆ ತೆರಳಿ ಹರಟೆ ಹೊಡೆಯುತ್ತಿದ್ದ. ಕೆಲ ತಿಂಗಳುಗಳ ಹಿಂದೆಆರೋಪಿ ಯುವಕ,  ಯುವತಿಯ ಮುಂದೆ ವಿವಾಹ ಪ್ರಸ್ತಾಪ ಇಟ್ಟಿದ್ದ. ಆದರೆ. ಆಕೆ ಆತನ ಪ್ರಸ್ತಾಪ ತಿರಸ್ಕರಿಸಿದ್ದಳು ಎನ್ನಲಾಗಿದೆ.
 
ಯುವತಿ ಸಿಂಧುಜಾ ಪೋಷಕರು ವರನಿಗಾಗಿ ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಜಾಹೀರಾತು ಹಾಕಿದ್ದರು. ಇದರಿಂದ ಆಕ್ರೋಶಗೊಂಡ ಆಕಾಶ್, ಸಿಂಧುಜಾ ಪೋಷಕರಿಗೆ ಬೆದರಿಕೆ ಹಾಕಿದ್ದ.
 
ನಿನ್ನೆ ರಾತ್ರಿ ಸಿಂಧುಜಾ ಮನೆಗೆ ಬಂದ ಆಕಾಶ್ ಜಗಳ ಆರಂಭಿಸಿದ. ಕೋಪದ ಭರದಲ್ಲಿ ಸಿಂಧುಜಾ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ. ಸಿಂಧುಜಾ ಕೂಗಿಗೆ ಓಡೋಡಿ ಬಂದ ಸಿಂಧುಜಾ ತಾಯಿ ಮತ್ತು ಸಹೋದರಿ ಸುಟ್ಟಗಾಯಗಳಿಂದ ಉಳಿಸಲು ಯತ್ನಿಸಿದರು. ಮನೆಯವರ ಕೂಗಾಟ ಕೇಳಿ ನೆರೆಹೊರೆಯವರು ಸಹಾಯಕ್ಕಾಗಿ ಧಾವಿಸಿದರು.  
 
ಈ ಸಂದರ್ಭದಲ್ಲಿ ಪರಾರಿಯಾಗಲು ಯತ್ನಿಸಿದ ಆಕಾಶ್‌ನನ್ನು ಹಿಡಿದ ಸ್ಥಳೀಯರು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಮೂವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸಿಂಧುಜಾ ಬದುಕುಳಿಯಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ವಿವಾಹ ಪ್ರಸ್ತಾಪವನ್ನು ತಿರಸ್ಕರಿಸಿದ 22 ವರ್ಷದ ಯುವತಿಯನ್ನು ಜೀವಂತವಾಗಿ ದಹಿಸಿದ ಆರೋಪಿ ಯುವಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುವತಿಯನ್ನು ಉಳಿಸಲು ಹೋದ ತಾಯಿ ಮತ್ತು ಸಹೋದರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
 
 ಐಟಿ ಕಂಪೆನಿಯಲ್ಲಿರುವ ಐಟಿ ಕಂಪೆನಿಯಲ್ಲಿ ಯುವತಿ ಸಿಂಧುಜಾ ಉದ್ಯೋಗಿಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
  
ಸುಟ್ಟಗಾಯಗಳಿಂದ ಗಂಭೀರವಾಗಿ ಗಾಯಗೊಂಡ ಸಿಂಧುಜಾಳನ್ನು ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಸಿಂಧುಜಾ ತಾಯಿಗೆ ಶೇ.50 ರಷ್ಟು ಸುಟ್ಟಗಾಯಗಳಾಗಿದ್ದು ಸಹೋದರಿ ನಿವೇದಿಕಾಗೆ ಶೇ.20 ರಷ್ಟು ಗಾಯಗಳಾಗಿವೆ. ಸಿಂಧುಜಾ ತಂದೆ ಶನ್ಮುಗಮ್ ದುಬೈಯಲ್ಲಿ ಉದ್ಯೋಗಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments