Select Your Language

Notifications

webdunia
webdunia
webdunia
webdunia

ಪ್ರೀತಿಸಲು ನಕಾರ: ಯುವತಿಗೆ ಯುವಕರು ಮಾಡಿದ್ದೇನು ಗೊತ್ತಾ?

ಪ್ರೀತಿಸಲು ನಕಾರ: ಯುವತಿಗೆ ಯುವಕರು ಮಾಡಿದ್ದೇನು ಗೊತ್ತಾ?
delhi , ಭಾನುವಾರ, 12 ನವೆಂಬರ್ 2023 (14:10 IST)
ಪ್ರೀತಿಸಲು ನಿರಾಕರಿಸಿದ ಯುವತಿಗೆ  ಯುವಕರು ಮಾಡಿದ್ದೇನು ಗೊತ್ತಾ? ಮಚ್ಚಿನಿಂದ ಯುವತಿಯ ಮೇಲೆ ಹಲ್ಲೆ ನಡೆಸಿ ಕ್ರೂರತೆಯನ್ನು ಮೆರೆದ ಯುವಕರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. 
 
ಹಲ್ಲೆಗೊಳಗಾದ ಯುವತಿಯನ್ನು ಮಾನಸ ಎಂದು ಹೇಳಲಾಗಿದ್ದು, ಈಕೆ ದೆಹಲಿ ನಿವಾಸಿ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯುವತಿ ತೀವ್ರವಾಗಿ ಗಾಯಗೊಂಡಿದ್ದು, ಎರಡೂ ಕೈಗಳಿಗೆ ದೊಡ್ಡ ಪ್ರಮಾಣದ ಪೆಟ್ಟಾಗಿದೆ. ಈ ಹಿನ್ನೆಲೆಯಲ್ಲಿ ಯುವತಿಯನ್ನು ದೆಹಲಿಯ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
 
 
ಪ್ರೀತಿಸಲು ನಿರಾಕರಿಸಿದಳು ಎಂಬ ಕಾರಣಕ್ಕೆ ಮೂವರು ಯುವಕರ ದುರುಳರ ಗುಂಪೊಂದು ಓರ್ವ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಧಾರುಣ ಘಟನೆ ದೆಹಲಿಯ ಸಮೀಪ ಇಂದು ಮಧ್ಯಾಹ್ನ ನಡೆದಿದೆ. 
 
ಯುವತಿ ಮೇಲೆ ನಡೆದ ಹಲ್ಲೆಯನ್ನು ಗ್ರಾಮಸ್ಥರು ಕಂಡಿದ್ದು, ಕೂಡಲೇ ಪುಂಡರ ಗುಂಪನ್ನು ಬೆನ್ನಟ್ಟಿದ್ದಾರೆ. ಬಳಿಕ ಸಫಲರಾದ ಗ್ರಾಮಸ್ಥರು ಓರ್ವ ರವಿ ಎಂಬ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಆತನಿಗೆ ಮನ ಬಂದಂತೆ ಥಳಿಸಿ ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ. 
 
ಇನ್ನು ಪರಾರಿಯಾಗಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ತನಿಖಾ ತಂಡವನ್ನು ರಚಿಸಿದ್ದು, ಪತ್ತೆಗೆ ಬಲೆ ಬೀಸಿದ್ದಾರೆ. ಪ್ರೀತಿಸುವಂತೆ ಯುವತಿಗೆ ಸದಾ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ದೆಹಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ-ನಗರ ಪೊಲೀಸ್ ಅಯುಕ್ತ ಬಿ‌.ದಯಾನಂದ್