Webdunia - Bharat's app for daily news and videos

Install App

ಪ್ರೀತಿಸಲು ನಕಾರ: ಯುವತಿಗೆ ಯುವಕರು ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 12 ನವೆಂಬರ್ 2023 (14:10 IST)
ಪ್ರೀತಿಸಲು ನಿರಾಕರಿಸಿದ ಯುವತಿಗೆ  ಯುವಕರು ಮಾಡಿದ್ದೇನು ಗೊತ್ತಾ? ಮಚ್ಚಿನಿಂದ ಯುವತಿಯ ಮೇಲೆ ಹಲ್ಲೆ ನಡೆಸಿ ಕ್ರೂರತೆಯನ್ನು ಮೆರೆದ ಯುವಕರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. 
 
ಹಲ್ಲೆಗೊಳಗಾದ ಯುವತಿಯನ್ನು ಮಾನಸ ಎಂದು ಹೇಳಲಾಗಿದ್ದು, ಈಕೆ ದೆಹಲಿ ನಿವಾಸಿ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯುವತಿ ತೀವ್ರವಾಗಿ ಗಾಯಗೊಂಡಿದ್ದು, ಎರಡೂ ಕೈಗಳಿಗೆ ದೊಡ್ಡ ಪ್ರಮಾಣದ ಪೆಟ್ಟಾಗಿದೆ. ಈ ಹಿನ್ನೆಲೆಯಲ್ಲಿ ಯುವತಿಯನ್ನು ದೆಹಲಿಯ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
 
 
ಪ್ರೀತಿಸಲು ನಿರಾಕರಿಸಿದಳು ಎಂಬ ಕಾರಣಕ್ಕೆ ಮೂವರು ಯುವಕರ ದುರುಳರ ಗುಂಪೊಂದು ಓರ್ವ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಧಾರುಣ ಘಟನೆ ದೆಹಲಿಯ ಸಮೀಪ ಇಂದು ಮಧ್ಯಾಹ್ನ ನಡೆದಿದೆ. 
 
ಯುವತಿ ಮೇಲೆ ನಡೆದ ಹಲ್ಲೆಯನ್ನು ಗ್ರಾಮಸ್ಥರು ಕಂಡಿದ್ದು, ಕೂಡಲೇ ಪುಂಡರ ಗುಂಪನ್ನು ಬೆನ್ನಟ್ಟಿದ್ದಾರೆ. ಬಳಿಕ ಸಫಲರಾದ ಗ್ರಾಮಸ್ಥರು ಓರ್ವ ರವಿ ಎಂಬ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಆತನಿಗೆ ಮನ ಬಂದಂತೆ ಥಳಿಸಿ ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ. 
 
ಇನ್ನು ಪರಾರಿಯಾಗಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ತನಿಖಾ ತಂಡವನ್ನು ರಚಿಸಿದ್ದು, ಪತ್ತೆಗೆ ಬಲೆ ಬೀಸಿದ್ದಾರೆ. ಪ್ರೀತಿಸುವಂತೆ ಯುವತಿಗೆ ಸದಾ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ದೆಹಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments