ಕಾಂಗ್ರೆಸ್ ನ ಹಿರಿಯ ನಾಯಕ ಬಿನೋದ್ ಶರ್ಮಾ ಪಕ್ಷಕ್ಕೆ ರಾಜೀನಾಮೆ ಕೊಡಲು ಕಾರಣವೇನು ಗೊತ್ತಾ?

Webdunia
ಸೋಮವಾರ, 11 ಮಾರ್ಚ್ 2019 (17:15 IST)
ಪಟನಾ : ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಭಾರತೀಯ ಸೇನೆ ನಡೆಸಿದ ಏರ್ ಸ್ಟ್ರೈಕ್ ಕುರಿತು ಸಾಕ್ಷಿ ಕೇಳಿದ್ದಕ್ಕೆ ಬೇಸರಗೊಂಡು ಬಿಹಾರ ಕಾಂಗ್ರೆಸ್ ನ ಹಿರಿಯ ನಾಯಕ ಬಿನೋದ್ ಶರ್ಮಾ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.


ಈ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿರುವ ಬಿನೋದ್ ಶರ್ಮಾ, ಬಾಲ್ ಕೋಟ್ ಉಗ್ರರ ಶಿಬಿರಗಳ ಮೇಲೆ ನಡೆಸಿದ ದಾಳಿಗೆ ಸಾಕ್ಷ್ಯ ಕೇಳುವ ಮೂಲಕ ಪಕ್ಷದ ಹೈಕಮಾಂಡ್ ತಳಮಟ್ಟದ ಕಾರ್ಯಕರ್ತರ ಹಾಗೂ ಜನಸಾಮಾನ್ಯರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹೇಳಿದ್ದಾರೆ.


ಉಗ್ರ ನೆಲೆಗಳ ಮೇಲೆ ನಡೆಸಿದ ದಾಳಿಗೆ ಪದೇ ಪದೇ ಸಾಕ್ಷಿ ಕೇಳುವುದು ನಾಚಿಕೆಗೇಡು ಮತ್ತು ಬಾಲಿಶತನದ ವರ್ತನೆ, ಕಳೆದ 30 ವರ್ಷಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೇನೆ. ಈಗ ಇಂತಹ ಸನ್ನಿವೇಶದಲ್ಲಿ ಭಾರವಾದ ಹೃದಯದೊಂದಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಜೆಡಿಎಸ್‌ಗೆ 25 ವರ್ಷಗಳ ಸಂಭ್ರಮ, ಶಾಲು ತಿರುಗಿಸಿ ದೇವೇಗೌಡರ ಸಂಭ್ರಮ

ಐಎಸ್‌ಐ ಜತೆ ನಂಟು ಬೆಳೆಸಿ ಖತರ್ನಾಕ್ ಕೆಲಸ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್‌

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments