ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್ ಬಳಿ ಮನವಿ ಮಾಡಿಕೊಂಡಿದ್ದು ಯಾಕಾಗಿ ಗೊತ್ತೇ?

Webdunia
ಗುರುವಾರ, 12 ಜುಲೈ 2018 (12:54 IST)
ನವದೆಹಲಿ : ಮದುವೆಯ ಪಾವಿತ್ರ್ಯತೆ ರಕ್ಷಿಸಲು 157 ವರ್ಷದ ಹಿಂದೆ ಬ್ರಿಟಿಷ್‌ ಸರ್ಕಾರದ ಅವಧಿಯಲ್ಲಿ ಜಾರಿಯಾದ ಕಾನೂನನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಮನವಿಯೊಂದನ್ನು ಮಾಡಿದೆ.


ಯಾವುದೇ ಪುರುಷ ಪರಸ್ತ್ರೀಯೊಂದಿಗೆ ಆಕೆಯ ಪತಿಯ ಅನುಮತಿ ಇಲ್ಲದೇ ಸಂಬಂಧ ಹೊಂದಿದರೆ ಆತನಿಗೆ ಭಾರತೀಯ ದಂಡ ಸಂಹಿತೆ 497ರ ಪ್ರಕಾರ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು. ಮಹಿಳೆಗೆ ಯಾವುದೇ ಶಿಕ್ಷೆಯಾಗುವುದಿಲ್ಲ. ಇದು ಬ್ರಿಟಿಷರ ಕಾಲದಲ್ಲಿ ಜಾರಿಯಾದ ಕಾನೂನಾಗಿದೆ.


ಆದರೆ ವ್ಯಭಿಚಾರ (ಅಕ್ರಮ ಸಂಬಂಧ) ಪ್ರಕರಣಗಳಲ್ಲಿ ಪುರುಷ ಮತ್ತು ಮಹಿಳೆ- ಇಬ್ಬರನ್ನೂ ಸಮಾನ ದೋಷಿಗಳು ಎಂದು ಪರಿಗಣಿಸಬೇಕು ಅಥವಾ ಪುರುಷ/ಮಹಿಳೆಯರ ನಡುವೆ ತಾರತಮ್ಯ ಮಾಡುವ ವ್ಯಭಿಚಾರ ನಿರ್ಬಂಧ ಕಾನೂನನ್ನು ರದ್ದುಗೊಳಿಸಬೇಕು' ಎಂದು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿ, ಈ ಅರ್ಜಿಯನ್ನು ವಜಾ ಮಾಡುವಂತೆ ನ್ಯಾಯಪೀಠಕ್ಕೆ ಕೇಳಿಕೊಂಡಿದೆ. ಹಾಗೇ ಒಂದು ವೇಳೆ ಈ ದಂಡ ಸಂಹಿತೆ ರದ್ದು ಮಾಡಿದರೆ ವಿವಾಹ ಪದ್ಧತಿಯ ಪಾವಿತ್ರ್ಯ ಮತ್ತು ನಂಬಿಕೆಗೆ ಹಾನಿಯಾಗುವ ಸಾಧ್ಯತೆಗಳಿವೆ ಎಂದು ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್ ಬಳಿ ಮನವಿ ಮಾಡಿಕೊಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments