Webdunia - Bharat's app for daily news and videos

Install App

ಬದುಕಿದ್ದ ಮಗುವನ್ನು ಸತ್ತಿದೆಯೆಂದ ವೈದ್ಯರು!

Webdunia
ಮಂಗಳವಾರ, 20 ಜೂನ್ 2017 (12:02 IST)
ನವದೆಹಲಿ: ಇದನ್ನು ವೈದ್ಯರ ನಿರ್ಲ್ಯಕ್ಷ ಎನ್ನಬೇಕೋ ಅಥವಾ ಆ ಮಗುವಿನ ಅದೃಷ್ಟ ಎನ್ನಬೇಕೋ ಗೊತ್ತಿಲ್ಲ. ದೆಹಲಿಯ ಆಸ್ಪತ್ರೆಯೊಂದರ ವೈದ್ಯರ ನಿರ್ಲ್ಯಕ್ಷದಿಂದಾಗಿ ಜೀವಂತವಿದ್ದ ಮಗುವನ್ನು ಪೋಷಕರು ಮಣ್ಣು ಮಾಡಲು ಹೊರಟಿದ್ದರು.

 
ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯ ವೈದ್ಯರು ಈ ರೀತಿ ಎಡವಟ್ಟು ಮಾಡಿಕೊಂಡಿದ್ದಾರೆ. ವಿಪರೀತ ರಕ್ತ ಸ್ರಾವದಿಂದಾಗಿ ಐದು ತಿಂಗಳ ಗರ್ಭಿಣಿ ಮಹಿಳೆಗೆ ಗರ್ಭಪಾತವಾಗಿತ್ತು. ಮಗುವನ್ನು ಹೊರತೆಗೆದ ವೈದ್ಯರು ಅದು ಮೃತಪಟ್ಟಿದೆಯೆಂದು ಪ್ಯಾಲಿಥಿನ್ ಕವರ್ ನಲ್ಲಿ ಹಾಕಿ ಕುಟುಂಬದವರಿಗೆ ಹಸ್ತಾಂತರಿಸಿದ್ದರು.

ಆದರೆ ಮಗುವನ್ನು ಮಣ್ಣು ಮಾಡಲು ಹೊರಡುವಾಗ ಕುಟುಂಬ ಸದಸ್ಯರಿಗೆ ಮಗುವಿನ ಕ್ಷೀಣ ಉಸಿರಾಟ ಗೊತ್ತಾಯಿತು. ಹೀಗಾಗಿ ತಕ್ಷಣವೇ ಮಗುವನ್ನು ಐಸಿಯುಗೆ ಶಿಫ್ಟ್ ಮಾಡಲಾಯಿತು. ಆದರೂ 30 ಗಂಟೆಗಳ ಸತತ ಹೋರಾಟದ ನಂತರ ಮಗು ಮೃತಪಟ್ಟಿತು.

ಒಂದು ವೇಳೆ ತಕ್ಷಣವೇ ಮಗುವಿಗೆ ಸೂಕ್ತ ಚಿಕಿತ್ಸೆ ಸಿಕ್ಕಿದ್ದರೆ, ಬದುಕಿರುತ್ತಿತ್ತೇನೋ. ಇದೀಗ ವೈದ್ಯರ ನಿರ್ಲ್ಯಕ್ಷದಿಂದ ಎಚ್ಚೆತ್ತುಕೊಂಡಿರುವ ಕೇಂದ್ರ ಆರೋಗ್ಯ ಸಚಿವಾಲಯ ವೈದ್ಯರಿಂದ ವರದಿ ಕೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments