Select Your Language

Notifications

webdunia
webdunia
webdunia
webdunia

ಪತ್ನಿಯಿಂದ ವಿಚ್ಛೇದನ ಪಡೆಯಲು ಪತಿ ಹೀಗೆ ಮಾಡೋದಾ?

ಪತ್ನಿಯಿಂದ ವಿಚ್ಛೇದನ ಪಡೆಯಲು ಪತಿ ಹೀಗೆ ಮಾಡೋದಾ?
ಅಮರಾವತಿ , ಸೋಮವಾರ, 19 ಡಿಸೆಂಬರ್ 2022 (11:34 IST)
ಅಮರಾವತಿ : ವ್ಯಕ್ತಿಯೊಬ್ಬ ಪತ್ನಿಯಿಂದ ವಿಚ್ಛೇದನ ಪಡೆಯಲು ಆಕೆಗೆ ಡಾಕ್ಟರ್ ಸಹಾಯದಿಂದ ಹೆಚ್ಐವಿ ಸೋಂಕಿತ ರಕ್ತ ಇಂಜೆಕ್ಷನ್ ಕೊಡಿಸಿದ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಎಂ. ಚರಣ್ (40) ಬಂಧಿತ ವ್ಯಕ್ತಿ. ಚರಣ್ ಮದುವೆ ಆಗಿ ಕೆಲವರ್ಷಗಳ ಕಾಲ ತನ್ನ ಪತ್ನಿಯೊಂದಿಗೆ ಸಂತೋಷದಿಂದ ಇದ್ದ. ದಂಪತಿಗೆ ಒಬ್ಬಳು ಮಗಳು ಇದ್ದಾಳೆ.

ಆದರೆ 2018ರಲ್ಲಿ ಚರಣ್ ವರದಕ್ಷಿಣೆಗಾಗಿ ಹಾಗೂ ಗಂಡು ಮಗುವನ್ನು ಹೆರುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೇ ವಿಶಾಖಪಟ್ಟಣಂನ 21 ವರ್ಷದ ಯುವತಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದ ಎಂಬ ಆರೋಪ ಕೇಳಿ ಬಂದಿದೆ.

ಈ ಎಲ್ಲಾ ಕಾರಣದಿಂದಾಗಿ ಆರೋಪಿ ಚರಣ್ ತನ್ನ ಪತ್ನಿ ಬಳಿ ವಿಚ್ಛೇದನ ನೀಡುವಂತೆ ಒತ್ತಾಯಿಸಿದ್ದಾನೆ. ಅಷ್ಟೇ ಅಲ್ಲದೇ ಆಕೆಯನ್ನು ಹೆಲ್ತ್ ಚೆಕಪ್ಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರ ಸಹಾಯದಿಂದ ಹೆಚ್ಐವಿ ಸೋಂಕಿತ ರಕ್ತ ಇಂಜೆಕ್ಷನ್ ಕೊಡಿಸಿದ್ದಾನೆ.  

 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಮಂಡ್ಯ ನಗರ ಬಂದ್‌!