Webdunia - Bharat's app for daily news and videos

Install App

ಕೌಟುಂಬಿಕ ದೌರ್ಜನ್ಯ ಪ್ರಕರಣ: ಭಾರ್ತಿಯನ್ನು ಆಗ್ರಾಕ್ಕೆ ಕರೆದೊಯ್ದ ತನಿಖಾಧಿಕಾರಿಗಳು

Webdunia
ಶನಿವಾರ, 3 ಅಕ್ಟೋಬರ್ 2015 (13:40 IST)
ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನು ಎದುರಿಸುತ್ತಿರುವ ಆಪ್ ಶಾಸಕ, ದೆಹಲಿಯ ಮಾಜಿ ಕಾನೂನು ಸಚಿವ ಸೋಮನಾಥ್ ಭಾರ್ತಿ ಅವರನ್ನು ತನಿಖಾಧಿಕಾರಿಗಳು ಶುಕ್ರವಾರ ಆಗ್ರಾಕ್ಕೆ ಕರೆದೊಯ್ದಿದ್ದಾರೆ.

ಸುಪ್ರೀಂಕೋರ್ಟ್ ಭಾರ್ತಿ ಅವರಿಗೆ ಮಧ್ಯಂತರ ಜಾಮೀನನ್ನು ನೀಡಲು ನಿರಾಕರಿಸಿದ್ದು, ಪೊಲೀಸ್ ಕಸ್ಟಡಿಯನ್ನು ಮೂರು ದಿನಗಳ ಕಾಲ ಮುಂದುವರೆಸಲಾಗಿದೆ. 
 
ಬಂಧನದಿಂದ ತಪ್ಪಿಸಿಕೊಳ್ಳಲು ಭಾರ್ತಿ ಆಗ್ರಾ, ಮಥುರಾ ಸೇರಿದಂತೆ ಹಲವು ಪ್ರದೇಶಗಳಿಗೆ ಪಲಾಯನ ಮಾಡಿದ್ದರು. ಆ ಪ್ರದೇಶಗಳಿಗೆಲ್ಲಾ ಭಾರ್ತಿಯವರನ್ನು ಜತೆಗೆ ಕರೆದುಕೊಂಡು ಪೊಲೀಸರು ಭೇಟಿ ನೀಡುತ್ತಿದ್ದಾರೆ. 
 
ಶನಿವಾರ ಅವರನ್ನು ಮಥುರಾಕ್ಕೆ ಕರೆದೊಯ್ಯಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಪ್ರದೇಶಗಳಲೆಲ್ಲಾ ಭಾರ್ತಿಗೆ ಆಶ್ರಯ ನೀಡಿದವರನ್ನೆಲ್ಲಾ ಪೊಲೀಸರು ವಿಚಾರಣೆಗೊಳಪಡಿಸಲಿದ್ದಾರೆ.
 
ಸೋಮನಾಥ್ ಭಾರ್ತಿ ಕಳೆದ ಮಂಗಳವಾರ ಪೊಲೀಸರ ಮುಂದೆ ಶರಣಾಗಿದ್ದರು. ಭಾರ್ತಿ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಶರಣಾಗುವಂತೆ ಸೂಚನೆ ನೀಡಿತ್ತು. ಸೋಮನಾಥ್ ಭಾರ್ತಿ ಅವರ ವಿರುದ್ಧ ಪತ್ನಿ ಲಿಪಿಕಾ ಅವರು ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments