Webdunia - Bharat's app for daily news and videos

Install App

ಪ್ರಜ್ವಲ್ ಹೇಳಿಕೆ ಬಗ್ಗೆ ಎಚ್.ಡಿ. ರೇವಣ್ಣ ಪ್ರತಿಕ್ರಿಯೆ ಹೀಗಿತ್ತು

Webdunia
ಶುಕ್ರವಾರ, 7 ಜುಲೈ 2017 (11:16 IST)
ಜೆಡಿಎಸ್ ಪಕ್ಷದ ವಿರುದ್ಧವೇ ಗುಡುಗುವ ಮೂಲಕ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ. ಪಕ್ಷಕ್ಕಾಗಿ ದುಡಿದವರಿಗೆ ಹಿಂದಿನ ಸೀಟ್`ನಲ್ಲಿ ಕೂರಿಸಿತ್ತಾರೆ, ಸೂಟ್ ಕೇಸ್ ತಂದವರಿಗೆ ಮೊದಲ ಬೆಂಚ್`ನಲ್ಲಿ ಕೂರಿಸುತ್ತಾರೆ ಎಂದು ಹುಣಸೂರಿನಲ್ಲಿ ಹೇಳಿಕೆ ನೀಡಿದ್ದರು. ಪುತ್ರನ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಚ್.ಡಿ.  ರೇವಣ್ಣ, ಪ್ರಜ್ವಲ್ ಹೇಳಿಕೆಗೆ ಹೆಚ್ಚು ಮಹತ್ವ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಆಷಾಢ ಶುಕ್ರವಾರ ಪ್ರಯುಕ್ತ ಪತ್ನಿ ಸಮೇತರಾಗಿ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದ ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಎಚ್. ವಿಶ್ವನಾಥ್ ಜೆಡಿಎಸ್ ಸೇರ್ಪಡೆ ಬಗ್ಗೆ ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ , ಅವರು ಹಿರಿಯ ನಾಯಕರಾಗಿದ್ದು ಅಪಾರ ಅನುಭವವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇವೇಳೆ, ಜೆಡಿಎಸ್`ನಲ್ಲಿ ದೇವೇಗೌಡರು, ಕುಮಾರಸ್ವಾಮಿ ಹೇಳಿದ ಮಾತೇ ಅಂತಿಮ. ಅವರ ಮಾತನ್ನ ಯಾರನ್ನೂ ಮೀರುವುದಿಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂ ದು ರೇವಣ್ಣ ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: 18 ಅಡಿ ಉದ್ದದ ಹಾವನ್ನು ಏಕಾಂಗಿಯಾಗಿ ಸೆರೆಹಿಡಿದ ಕೆಚ್ಚೆದೆಯ ಮಹಿಳಾ ಅಧಿಕಾರಿ

ಅಮ್ಮನ ಜೊತೆ ಸೇರಿಕೊಂಡು ಅತ್ತೆಗೆ ಸೊಸೆ ಹೀಗೆ ಮಾಡೋದಾ: ಶಾಕಿಂಗ್ ವಿಡಿಯೋ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Video: ಪೊಲೀಸರ ಮೇಲೆಯೇ ದಾಳಿ ಮಾಡಿದ ದುಷ್ಕರ್ಮಿಗಳಿಗೆ ಯುಪಿ ಪೊಲೀಸರು ಪಾಠ ಕಲಿಸಿದ್ದು ಹೀಗೆ

ಹೊಳೆ ಬದಿ ಸ್ನಾನ ಮಾಡುವಾಗ ಬಂತೊಂದು ದೊಡ್ಡ ಸರ್ಪ: ಶಾಕಿಂಗ್ ವಿಡಿಯೋ

ಮುಂದಿನ ಸುದ್ದಿ
Show comments