Webdunia - Bharat's app for daily news and videos

Install App

ಭಗತ್ ಸಿಂಗ್, ಚಂದ್ರ ಶೇಖರ್ ಆಜಾದ್‌ರನ್ನು ಉಗ್ರರೆನ್ನಬೇಡಿ

Webdunia
ಶುಕ್ರವಾರ, 29 ಏಪ್ರಿಲ್ 2016 (14:03 IST)
ಸ್ವಾತಂತ್ರ್ಯ ಹೋರಾಟಗಾರರನ್ನು ಉಲ್ಲೇಖಿಸುವಾಗ ಉಗ್ರರೆಂಬ ಪದ ಬಳಸಬೇಡಿ, ಪ್ರಸ್ತುತ ಆ ಪದಕ್ಕೆ ಬೇರೆ ಅರ್ಥವಿದ್ದು ರಾಷ್ಟ್ರೀಯ ಭಾವನೆಗಳಿಗೆ ಧಕ್ಕೆಯಾಗಬಹುದು ಎಂದು ಸೂಚಿಸಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ದೆಹಲಿ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿದೆ

ದೆಹಲಿ ವಿಶ್ವವಿದ್ಯಾಲಯದ ಇತಿಹಾಸ ಪಠ್ಯಕ್ರಮದಲ್ಲಿ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಸೂರ್ಯಾ ಸೇನ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಕಾಂತ್ರಿಕಾರಿ ಉಗ್ರರು ಉಲ್ಲೇಖಿಸಲಾಗಿದೆ. 
 
ಇತಿಹಾಸಕಾರರಾದ ಬಿಪಿನ್ ಚಂದ್ರ ಮತ್ತು ಮೃದುಲಾ ಮುಖರ್ಜಿ ಎಂಬ ಲೇಖಕರು ಈ ವಿವಾದಿತ ಪಠ್ಯ ' ಭಾರತದ ಸ್ವಾತಂತ್ರ್ಯ ಹೋರಾಟ' ಬರೆದಿದ್ದು 20 ನೇ ಅಧ್ಯಾಯದಲ್ಲಿ ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು ಕ್ರಾಂತಿಕಾರಿ ಉಗ್ರರು ಎಂದು ಸಂಬೋಧಿಸಿದ್ದಾರೆ. ಅದರಲ್ಲಿ ಚಿತ್ತಗಾಂಗ್ ಚಳುವಳಿ ಮತ್ತು ಸ್ಯಾಂಡರ್ ಹತ್ಯೆಗೆ ಭಯೋತ್ಪಾದಕ ಕೃತ್ಯ ಎಂಬ ಹಣೆಪಟ್ಟಿ ನೀಡಲಾಗಿದೆ.  
 
ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸಂಬಂಧಿಗಳು ದೇಶಕ್ಕೆ ಸ್ವಾತಂತ್ರ್ಯ ಬಂದು 68 ವರ್ಷಗಳು ಗತಿಸಿದರೂ ಕ್ರಾಂತಿಕಾರಿಗಳನ್ನು ಭಯೋತ್ಪಾದಕರು ಎಂಬಂತೆ ಬಿಂಬಿಸುತ್ತಿರುವುದು ನಿಜಕ್ಕೂ ವಿಷಾದನೀಯ ಎಂದು ಖೇದ ವ್ಯಕ್ತಪಡಿಸಿದ್ದರು. ಜತೆಗೆ ಇದರಲ್ಲಿ ತಿದ್ದು ಪಡಿ ಮಾಡಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಪತ್ರ ಬರೆದಿದ್ದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments