Webdunia - Bharat's app for daily news and videos

Install App

ಇಷ್ಟು ಬೇಗ ಸಾಯಲ್ಲ: ವೇದಿಕೆಯಲ್ಲಿ ಅಸ್ವಸ್ಥರಾದ ಬೆನ್ನಲ್ಲೇ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ

Sampriya
ಭಾನುವಾರ, 29 ಸೆಪ್ಟಂಬರ್ 2024 (15:40 IST)
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಅಸ್ವಸ್ಥಗೊಂಡ ಘಟನೆ ನಡೆದಿದೆ.  ನಂತರ ಭಾಷಣ ಮಾಡಿದ ಅವರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಟೀಕಿಸಿದರು ಮತ್ತು "ಪ್ರಧಾನಿ ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೂ ನಾನು ಬದುಕುತ್ತೇನೆ" ಎಂದು ಹೇಳಿದರು.

ಜೆ & ಕೆ ನಲ್ಲಿ ಮೂರನೇ ಹಂತದ ಚುನಾವಣೆಗೆ ಮುನ್ನ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಖರ್ಗೆ ಅವರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ವೇದಿಕೆಯಲ್ಲಿದ್ದ ನಾಯಕರು ಮಲ್ಲಿಕಾರ್ಜುನ ಕೈ ಹಿಡಿದು ಕೂರಿಸಿದ್ದಾರೆ.

ಒಂದು ಗುಟುಕು ನೀರು ಕುಡಿದ ನಂತರ ಆರಾಮ ಖರ್ಗೆ ಅವರು ಮತ್ತೇ ಭಾಷಣ ಮುಂದುವರೆಸಿದರು. "ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ನಾವು ಹೋರಾಡುತ್ತೇವೆ, ನನಗೆ 83 ವರ್ಷ, ನಾನು ಇಷ್ಟು ಬೇಗ ಸಾಯುವುದಿಲ್ಲ, ಪ್ರಧಾನಿ ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೆ ನಾನು ಬದುಕುತ್ತೇನೆ" ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ 1 ರಂದು ನಡೆಯಲಿರುವ ಅಂತಿಮ ಹಂತದ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಮೂರನೇ ಹಂತದ ಮತದಾನಕ್ಕೂ ಮುನ್ನ ಭಾನುವಾರ (ಸೆ.29) ಪ್ರಚಾರ ಕೊನೆಗೊಳ್ಳಲಿದೆ. ಒಂದು ದಶಕದಲ್ಲಿ ಈ ಪ್ರದೇಶದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ.

ಮೊದಲ ಹಂತವು ಸೆಪ್ಟೆಂಬರ್ 18 ರಂದು ನಡೆಯಿತು, ನಂತರ ಎರಡನೇ ಹಂತವು ಸೆಪ್ಟೆಂಬರ್ 25 ರಂದು ನಡೆಯಿತು. ಫಲಿತಾಂಶಗಳನ್ನು ಅಕ್ಟೋಬರ್ 8 ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ಮೂರನೇ ಹಂತದಲ್ಲಿ, 40 ಕ್ಷೇತ್ರಗಳು ಭಾಗವಹಿಸಲಿವೆ, ಈ ಪೈಕಿ 24 ಕ್ಷೇತ್ರಗಳು ಜಮ್ಮು ವಿಭಾಗದಲ್ಲಿ ನೆಲೆಗೊಂಡಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments