Webdunia - Bharat's app for daily news and videos

Install App

ಇಷ್ಟು ಬೇಗ ಸಾಯಲ್ಲ: ವೇದಿಕೆಯಲ್ಲಿ ಅಸ್ವಸ್ಥರಾದ ಬೆನ್ನಲ್ಲೇ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ

Sampriya
ಭಾನುವಾರ, 29 ಸೆಪ್ಟಂಬರ್ 2024 (15:40 IST)
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಅಸ್ವಸ್ಥಗೊಂಡ ಘಟನೆ ನಡೆದಿದೆ.  ನಂತರ ಭಾಷಣ ಮಾಡಿದ ಅವರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಟೀಕಿಸಿದರು ಮತ್ತು "ಪ್ರಧಾನಿ ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೂ ನಾನು ಬದುಕುತ್ತೇನೆ" ಎಂದು ಹೇಳಿದರು.

ಜೆ & ಕೆ ನಲ್ಲಿ ಮೂರನೇ ಹಂತದ ಚುನಾವಣೆಗೆ ಮುನ್ನ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಖರ್ಗೆ ಅವರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ವೇದಿಕೆಯಲ್ಲಿದ್ದ ನಾಯಕರು ಮಲ್ಲಿಕಾರ್ಜುನ ಕೈ ಹಿಡಿದು ಕೂರಿಸಿದ್ದಾರೆ.

ಒಂದು ಗುಟುಕು ನೀರು ಕುಡಿದ ನಂತರ ಆರಾಮ ಖರ್ಗೆ ಅವರು ಮತ್ತೇ ಭಾಷಣ ಮುಂದುವರೆಸಿದರು. "ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ನಾವು ಹೋರಾಡುತ್ತೇವೆ, ನನಗೆ 83 ವರ್ಷ, ನಾನು ಇಷ್ಟು ಬೇಗ ಸಾಯುವುದಿಲ್ಲ, ಪ್ರಧಾನಿ ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೆ ನಾನು ಬದುಕುತ್ತೇನೆ" ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ 1 ರಂದು ನಡೆಯಲಿರುವ ಅಂತಿಮ ಹಂತದ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಮೂರನೇ ಹಂತದ ಮತದಾನಕ್ಕೂ ಮುನ್ನ ಭಾನುವಾರ (ಸೆ.29) ಪ್ರಚಾರ ಕೊನೆಗೊಳ್ಳಲಿದೆ. ಒಂದು ದಶಕದಲ್ಲಿ ಈ ಪ್ರದೇಶದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ.

ಮೊದಲ ಹಂತವು ಸೆಪ್ಟೆಂಬರ್ 18 ರಂದು ನಡೆಯಿತು, ನಂತರ ಎರಡನೇ ಹಂತವು ಸೆಪ್ಟೆಂಬರ್ 25 ರಂದು ನಡೆಯಿತು. ಫಲಿತಾಂಶಗಳನ್ನು ಅಕ್ಟೋಬರ್ 8 ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ಮೂರನೇ ಹಂತದಲ್ಲಿ, 40 ಕ್ಷೇತ್ರಗಳು ಭಾಗವಹಿಸಲಿವೆ, ಈ ಪೈಕಿ 24 ಕ್ಷೇತ್ರಗಳು ಜಮ್ಮು ವಿಭಾಗದಲ್ಲಿ ನೆಲೆಗೊಂಡಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments