Webdunia - Bharat's app for daily news and videos

Install App

ನನ್ನ ಗಮನವನ್ನು ಬೇರೆಡೆಗೆ ಸೆಳೆಯಬೇಡಿ: ಕೋಲ್ಕತ್ತಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ರಾಹುಲ್ ಗಾಂಧಿ ರಿಯ್ಯಾಕ್ಷನ್

Sampriya
ಮಂಗಳವಾರ, 20 ಆಗಸ್ಟ್ 2024 (18:57 IST)
Photo Courtesy X
ರಾಯ್‌ಬರೇಲಿ: ಕೋಲ್ಕತ್ತಾ ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮಾಧ್ಯಮದವರ ಪ್ರಶ್ನೆಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು 'ನನ್ನ ಗಮನವನ್ನು ಬೇರೆಡೆಗೆ ಸೆಳೆಯಬೇಡಿ' ಎಂದು ಹೇಳಿರುವುದಕ್ಕೆ ಬಿಜೆಪಿ ಕಿಡಿಕಾರಿದೆ.

ತಮ್ಮ ಲೋಕಸಭಾ ಕ್ಷೇತ್ರದಲ್ಲಿ ಗುಂಡೇಟಿಗೆ ಬಲಿಯಾದ ದಲಿತ ಯುವಕನ ಕುಟುಂಬವನ್ನು ಇಂದು ರಾಹುಲ್ ಗಾಂಧಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಮಾಧ್ಯಮದವರು ರಾಹುಲ್ ಗಾಂಧಿ ಅವರಲ್ಲಿ ಕೋಲ್ಕತ್ತಾ ವೈದ್ಯೆ ಪ್ರಕರಣ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಾನು ಇಂದು ನನ್ನ ಕ್ಷೇತ್ರವಾದ ರಾಯ್‌ ಬರೇಲಿಯಲ್ಲಿ ಗುಂಡೇಟಿಗೆ ಬಲಿಯಾದ ಕುಟುಂಬವನ್ನು ಭೇಟಿ ಮಾಡಲು ಬಂದಿದ್ದೇನೆ. ನೀವು ಈ ವಿಷಯವನ್ನು ಪ್ರಸ್ತಾಪಿಸದೆ  ನನ್ನ ಗಮನವನ್ನು ಬೇರೆಡೆಗೆ ಸೆಳೆಯಲು ಬಯಸುತ್ತಿದ್ದೀರಿ. ದಲಿತರ ಧ್ವನಿಗೆ ಮಹತ್ವ ಕೊಡಲು ನೀವು ಬಯಸುವುದಿಲ್ಲ, ನಾನು ದಲಿತರನ್ನು ರಕ್ಷಿಸಲು ಮತ್ತು ಅವರ ಸಮಸ್ಯೆಯನ್ನು ಕೇಳಲು ಇಲ್ಲಿಗೆ ಬಂದಿದ್ದೇನೆ.

ನಾನು ಯಾವುದೇ ಗೊಂದಲವನ್ನು ಅನುಮತಿಸುವುದಿಲ್ಲ. ಕೋಲ್ಕತ್ತಾ ಪ್ರಕರಣದ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದು ಅವರು ಹೇಳಿದರು.

ಭಾರತೀಯ ಜನತಾ ಪಕ್ಷದ ವಕ್ತಾರ ಶೆಹಜಾದ್ ಪೂನ್ವಾಲಾ ಅವರು ಗಾಂಧಿಯವರ ಹೇಳಿಕೆಯನ್ನು "ಆಘಾತಕಾರಿ" ಎಂದು ಕರೆದರು.

ರಾಹುಲ್ ಗಾಂಧಿ ಹೇಳಿಕೆಗೆ ಆಕ್ರೋಶ ಹೊರಹಾಕುತ್ತಿದ್ದು, ಈ ವ್ಯಕ್ತಿ ತಾನು ಮಹಿಳೆಯರಿಗಾಗಿ ಹೋರಾಡುತ್ತಿದ್ದೇನೆ ಎಂದು ಹತ್ರಾಸ್‌ಗೆ ಮೊದಲು ಹೋಗುತ್ತಾರೆ. ಆದರೆ ಕೋಲ್ಕತ್ತಾದ ಭಯಾನಕ ಪ್ರಕರಣವನ್ನು ಒಂದು ಪ್ರಮುಖವಲ್ಲದ ವಿಷಯ ಎಂದು ಕರೆಯುತ್ತಾನೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments