Webdunia - Bharat's app for daily news and videos

Install App

ಕೀಳು ರಾಜಕೀಯದಲ್ಲಿ ಸೇನೆಯನ್ನು ಎಳೆಯಬೇಡಿ: ಬಿಜೆಪಿಗೆ ಲಾಲು ವಾರ್ನಿಂಗ್

Webdunia
ಸೋಮವಾರ, 24 ಅಕ್ಟೋಬರ್ 2016 (14:39 IST)
ಬಲಪಂಥೀಯ ಸಂಘಟನೆಗಳು ಭಾರತೀಯ ಸೇನೆಯ ಸೀಮಿತ ದಾಳಿಯನ್ನು 'ಮತಗಳು' ಮತ್ತು 'ಹಣ' ಗಳಿಕೆಗಾಗಿ ಬಳಸಲು ಯತ್ನಿಸುತ್ತಿವೆ. ಕೀಳು ರಾಜಕೀಯಕ್ಕೆ ಸೇನೆಯನ್ನು ಎಳೆಯಬೇಡಿ ಎಂದುರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗುಡುಗಿದ್ದಾರೆ. 
 
ಕೆಲವರು ಭಾರತೀಯ ಸೇನೆಯ ಹೆಸರಲ್ಲಿ ಮತಗಳನ್ನು ಕೇಳುತ್ತಿದ್ದರೆ, ಕೆಲವರು ನೋಟುಗಳನ್ನು ಕೇಳುತ್ತಿದ್ದಾರೆ. ಭಾರತೀಯ ಸೇನೆಯನ್ನು ರಾಜಕೀಯಕ್ಕೆ ಎಳೆಯುವ ಮೂಲಕ ಬಿಜೆಪಿ ಅತ್ಯಂತ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಬಲಪಂಥೀಯ ಸಂಘಟನೆಗಳೇ ನಾಚಿಕೆಯಾಗುವುದಿಲ್ಲವೇ? ನಿಮಗೆ ಗೋವು ಮತ್ತು ರಾಮಮಂದಿರದಿಂದ ಹೊಟ್ಟೆ ತುಂಬಿಲ್ಲವಾ? ಕನಿಷ್ಠ ಸೇನೆಯನ್ನಾದರೂ ರಾಜಕೀಯದಿಂದ ದೂರವಿಡಿ ಎಂದು ಲಾಲು ಟ್ವೀಟ್ ಮಾಡಿದ್ದಾರೆ. 
 
ಒಂದು ವೇಳೆ, ಪಾಕಿಸ್ತಾನದ ಕಲಾವಿದರನ್ನು ಹಾಕಿಕೊಂಡು ಸಿನೆಮಾ ಮಾಡಿದಲ್ಲಿ 5 ಕೋಟಿ ರೂಪಾಯಿಗಳ ಹಣವನ್ನು ಸೇನೆಗೆ ನೀಡಬೇಕು ಎನ್ನುವ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. 
 
ಬಲಪಂಥೀಯ ಸಂಘಟನೆಗಳು ವಿಶ್ವದಲ್ಲಿಯೇ ಅತಿಶ್ರೇಷ್ಠವಾದ ಭಾರತೀಯ ಸೇನೆಯನ್ನು ಕೂಡಾ ರಾಜಕೀಯಕ್ಕೆ ಬಳಸಿಕೊಳ್ಳುವ ಷಡ್ಯಂತ್ರ ರೂಪಿಸಿದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments