Webdunia - Bharat's app for daily news and videos

Install App

ರೆಡ್ಡಿ ಮಗಳ ಮದುವೆಗೆ ಹೋಗ್ಬೇಡಿ ಎಂದ ಬಿಜೆಪಿ ಹೈಕಮಾಂಡ್?

Webdunia
ಮಂಗಳವಾರ, 15 ನವೆಂಬರ್ 2016 (09:23 IST)
ಬೆಂಗಳೂರು:ನಗರದ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿರುವ ಬಿಜೆಪಿ ಮುಖಂಡ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಅವರ ಪುತ್ರಿ ವಿವಾಹದಲ್ಲಿ ಪಾಲ್ಗೊಳ್ಳದಂತೆ ಬಿಜೆಪಿ ಮುಖಂಡರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.

 
ಈಗಾಗಲೇ ಪ್ರಧಾನಿ ಮೋದಿ ಕಪ್ಪುಹಣ ನಿಗ್ರಹಕ್ಕೆ ಐದುನೂರು ಹಾಗೂ ಸಾವಿರ ಮುಖಬೆಲೆಯ ನೋಟುಗಳನ್ನು ರದ್ದು ಪಡಿಸಿದ್ದಾರೆ. ಕಪ್ಪುಹಣ ಹೊಂದಿರುವವರ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿರುತ್ತದೆ ಎಂದಿದ್ದಾರೆ. ಇವುಗಳ ನಡುವೆಯೇ ಕಾಂಗ್ರೆಸ್ ರೆಡ್ಡಿ ಕಪ್ಪು ಹಣದಿಂದ ಮಗಳ ಮದುವೆ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಅಷ್ಟೊಂದು ಅದ್ದೂರಿ ಮದುವೆ ಕೆಲವು ಸಂಶಯಕ್ಕೂ ಕಾರಣವಾಗಿದೆ. ಹೀಗಿದ್ದಾಗ ಬಿಜೆಪಿ ಮುಖಂಡರು ಮದುವೆಗೆ ಹೋದರೆ ಅದು ಮೋದಿಗೆ ಮಾಡಿರುವ ಅವಮಾನ ಹಾಗೂ ಕಪ್ಪುಹಣದ ವಿರುದ್ಧ ಹೋರಾಡುವ ಬಿಜೆಪಿಗೆ ನಾಚಿಕೆಗೇಡಿನ ವಿಷಯ ಎಂದು ಹೈಕಮಾಂಡ್ ಬಿಜೆಪಿ ಮುಖಂಡರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.
 
ಈ ಆರೋಪ, ಪ್ರತ್ಯಾರೋಪಗಳ ನಡುವೆಯೇ ಇಂದು ಮತ್ತು ನಾಳೆ ಅರಮನೆ ಮೈದಾನದಲ್ಲಿ ರೆಡ್ಡಿ ಪುತ್ರಿ ಬ್ರಹ್ಮಿಣಿ ಮದುವೆ ವೈಭವದಿಂದ ನಡೆಯಲಿದೆ. ರಾಜಮನೆತದ ಮದುವೆಯಂತೆ ವಿಜ್ರಂಭಣೆಯಿಂದ ಎರಡು ದಿನ ನಡೆಯಲಿದೆ. ಅದ್ಧೂರಿ ಸೆಟ್ ಹಾಕಲಾಗಿದ್ದು ಮಿನಿ ಬಳ್ಳಾರಿಯನ್ನೇ ನಿರ್ಮಿಸಲಾಗಿದೆ. ಹಳ್ಳಿ ಜೀವನ, ಪರಂಪರೆ ಬಿಂಬಿಸುವ ಮನೆ, ಕಟ್ಟೆ, ಮರ, ಗಿಡ ಹೀಗೆ ಎಲ್ಲವನ್ನೂ ನೈಜ ಎನ್ನುವಂತೆ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments