Webdunia - Bharat's app for daily news and videos

Install App

ಮೋದಿಯ ಸ್ವಚ್ಚ ಭಾರತ್ ಅಭಿಯಾನ್ ಲೇವಡಿ ಮಾಡಿದ ಬಿಜೆಪಿ ಸಚಿವ

Webdunia
ಸೋಮವಾರ, 12 ಅಕ್ಟೋಬರ್ 2015 (17:15 IST)
ಪ್ರಧಾನಿ ಮೋದಿಯವರ ಸ್ವಚ್ಚ ಭಾರತ್ ಅಭಿಯಾನವನ್ನು ಹರಿಯಾಣಾದ ಬಿಜೆಪಿ ಸಚಿವ ಕೃಷ್ಣ ಕುಮಾರ್ ಬೇಡಿ ಲೇವಡಿ ಮಾಡಿರುವ ಹೇಳಿಕೆ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.  
 
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸಾದ ಸ್ವಚ್ಚ ಭಾರತ್ ಅಭಿಯಾನ್, ಬಿಜೆಪಿ ನಾಯಕರಿಗೇ ಭಾರವಾಗಿದೆ. ಬಿಜೆಪಿ ನಾಯಕರ ನಿರಾಸಕ್ತಿಯಿಂದಾಗಿ ವಿಪಕ್ಷಗಳಿಗೆ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಹೊಸ ಅಸ್ತ್ರ ನೀಡಿದಂತಾಗಿದೆ.
 
ಹರಿಯಾಣಾದ ಬಿಜೆಪಿ ನೇತೃತ್ವದ ಸರಕಾರದ ಸಾಮಾಜಿಕ ನ್ಯಾಯ ಮತ್ತು ಉದ್ಯೋಗ ಖಾತೆ ಸಚಿವರಾದ ಬೇಡಿ, ಪೊರಕೆಯಿಂದ ಕಸಗುಡಿಸುತ್ತಾ ಮೋದಿಯಿಂದಾಗಿ ನಾವೆಲ್ಲಾ ಏನೇನು ಮಾಡಬೇಕಾಗುತ್ತದೆಯೇ ಗೊತ್ತಿಲ್ಲ ಎಂದು ನೀಡಿರುವ ಹೇಳಿಕೆ ಬಹಿರಂಗವಾಗಿದೆ.
 
ಫತೇಹಬಾದ್‌ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಬೇಡಿ, ಪೊರಕೆ ಹಿಡಿದು ಪಂಚಾಯತ್ ಭವನ್ ಸ್ವಚ್ಚಗೊಳಿಸುತ್ತಿರುವ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. 
 
ಸಚಿವರ ಹೇಳಿಕೆಯಿಂದ ಸ್ಥಳದಲ್ಲಿಯೇ ಉಪಸ್ಥಿತರಿದ್ದ ಹಿರಿಯ ಅಧಿಕಾರಿಗಳು ಕೂಡಾ ನಗೆಗಡಲಲ್ಲಿ ತೇಲಿದರು. ಆದರೆ, ಸ್ಥಳದಲ್ಲಿ ಉಪಸ್ಥಿತರಿದ್ದ ಮಾಧ್ಯಮಗಳ ಪ್ರತಿನಿಧಿಗಳತ್ತ ಸಂಶಯದಿಂದ ನೋಡಿ ನೀವು ರಿಕಾರ್ಡ್ ಮಾಡಿಕೊಂಡಿಲ್ಲ ಎಂದು ಭಾವಿಸುತ್ತೇನೆ. ದಯವಿಟ್ಟು ನನ್ನನ್ನು ಇಕ್ಕಟ್ಟಿನಲ್ಲಿ ಸಿಲುಕಿಸಬೇಡಿ ಎಂದಿರುವ ಹೇಳಿಕೆ ಕೂಡಾ ಖಾಸಗಿ ಟೆಲಿವಿಜನ್ ಚಾನೆಲ್‌ಗಳು ಬಿತ್ತರಿಸುತ್ತಿವೆ.
 
ಸಚಿವ ಕೃಷ್ಣ ಕುಮಾರ್ ಬೇಡಿ ಹೇಳಿಕೆ ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ವೈರಲ್ ಆಗಿದೆ ಎಂದು ಮೂಲಗಳು ತಿಳಿಸಿವೆ. 
 
ನಂತರ ತಮ್ಮ ತಪ್ಪು ಮುಚ್ಚಿಕೊಳ್ಳಲು ಯತ್ನಿಸಿದ ಸಚಿವ ಬೇಡಿ, ನಾವು ಸ್ವಚ್ಚ ಭಾರತ ಅಭಿಯಾನಕ್ಕೆ ಬದ್ಧರಾಗಿದ್ದೇವೆ. ಸಂಪೂರ್ಣ ಹರಿಯಾಣಾ ಸ್ವಚ್ಚವಾಗಿರಬೇಕು ಎಂದು ಬಯಸುವುದಾಗಿ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments