Webdunia - Bharat's app for daily news and videos

Install App

ಕೇರಳದೊಂದಿಗೆ ಸೆಣಸಬೇಡಿ, ಬಿಜೆಪಿ, ಆರೆಸ್ಸೆಸ್‌ಗೆ ಸಿಎಂ ವಿಜಯನ್ ತಾಕೀತು

Webdunia
ಸೋಮವಾರ, 16 ಅಕ್ಟೋಬರ್ 2017 (15:43 IST)
ವೆಂಗಾರಾ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ನಾಲ್ಕನೇ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಕೇರಳವನ್ನು ಕೆಣಕಬೇಡಿ ಎಂದು ಸಿಎಂ ಪಿಣರಾಯಿ ವಿಜಯನ್ ಬಿಜೆಪಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಒಂದು ತಿಂಗಳ ಬಿಜೆಪಿಯ ಜನ ರಕ್ಷ ಯಾತ್ರೆಯನ್ನು ಜನತೆ ಒಂದೇ ಧ್ವನಿಯಿಂದ ತಿರಸ್ಕರಿಸಿದ್ದಾರೆ ಎನ್ನುವುದಕ್ಕೆ ವೆಂಗಾರಾ ವಿಧಾನಸಭೆ ಉಪಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಮತ್ತು ಆರ್‌ಎಸ್‌ಎಸ್ ಕೇರಳದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದು, ಇದರಿಂದ ರಾಜ್ಯದ ಪ್ರವಾಸೋದ್ಯಮಕ್ಕೆ ಹಾನಿ ಮಾಡುವ "ದುರುದ್ದೇಶಪೂರಿತ ಪ್ರಚಾರ" ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
 
ಕೇರಳದಲ್ಲಿ ಪ್ರವಾಸೋದ್ಯಮವನ್ನು ಹಾಳುಗೆಡುವಲು ಕೇರಳ ಬಹಿಷ್ಕರಿಸುವಂತೆ ಕರೆ ನೀಡಲಾಗುತ್ತಿದೆ. ಇತರ ರಾಜ್ಯಗಳ ಜನತೆಗೆ ಕೂಡಾ ಕೇರಳಕ್ಕೆ ಹೋಗದಂತೆ ಸಲಹೆ ನೀಡಲಾಗುತ್ತಿದೆ. ಪ್ರವಾಸೋದ್ಯಮವನ್ನು ನಿಲ್ಲಿಸುವುದೇ ಬಿಜೆಪಿ, ಆರೆಸೆಸ್ಸ್ ಗುರಿಯಾಗಿದೆ ಎಂದು ಕಿಡಿಕಾರಿದ್ಗಾರೆ.
 
ಕೊಳಕು ತಂತ್ರಗಳು ಮತ್ತು ಕೋಮು ಧೃವೀಕರಣದ ಪ್ರಯತ್ನಗಳ ಹೊರತಾಗಿಯೂ ಬಿಜೆಪಿ ನಾಲ್ಕನೇ ಸ್ಥಾನಕ್ಕೆ ಕೆಳಮಟ್ಟದ ಮತ ಹಂಚಿಕೆ ಪಡೆದಿದೆ. ಉಪಚುನಾವಣೆ ಫಲಿತಾಂಶ ಕೇರಳದೊಂದಿಗೆ ಸೆಣಸಬೇಡಿ ಎನ್ನುವುದಕ್ಕೆ ಪ್ರಬಲ ಎಚ್ಚರಿಕೆಯಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments