Webdunia - Bharat's app for daily news and videos

Install App

ಆಂಗ್ಲ ಭಾಷೆಗಿಂತ ಭಾರತೀಯ ಭಾಷೆಗೆ ಮೊದಲ ಆದ್ಯತೆ ನೀಡಿ: ರಾಜನಾಥ್ ಸಿಂಗ್

Webdunia
ಶನಿವಾರ, 4 ಜುಲೈ 2015 (19:10 IST)
ಇಂಗ್ಲಿಷ್ ‌ಮ್ಯಾನ್ ಆಗಲು ಪ್ರಯತ್ನಿಸಬೇಡಿ. ಅಗತ್ಯಬಿದ್ದಾಗ ಆಂಗ್ಲ ಭಾಷೆಯಲ್ಲಿ ಮಾತನಾಡಿ ಎಂದು ವಿದ್ಯಾರ್ಥಿಗಳಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಲಹೆ ನೀಡಿದ್ದಾರೆ.
 
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅನೇಕರಿಗೆ ನಾನು ಆಂಗ್ಲ ವಿರೋಧಿ ಎನ್ನುವ ಭಾವನೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸುಮಾರು ಅರ್ಧಗಂಟೆಗಳ ಕಾಲ ಹಿಂದಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಅಗತ್ಯವಾಗಿದ್ದಾಗ ಇಂಗ್ಲೀಷ್ ಮಾತನಾಡಿ ಆದರೆ ಇಂಗ್ಲಿಷ್‌ಮ್ಯಾನ್ ಆಗಲು ಹೋಗಬೇಡಿ. ಆಂಗ್ಲ ಭಾಷೆ ಮಾತನಾಡುವುದರಿಂದ ಜ್ಞಾನ ಹೆಚ್ಚಾಗುವುದಿಲ್ಲ ಎಂದರು.    
 
ಆಂಗ್ಲ  ಭಾಷೆಯನ್ನು ಯಾರೊಬ್ಬರು ದ್ವೇಷಿಸಬಾರದು. ಆದರೆ, ಪ್ರತಿಯೊಬ್ಬ ಭಾರತೀಯನಿಗೆ ತನ್ನ ಸ್ವಂತ ಭಾಷೆಯ ಬಗ್ಗೆ ಅಭಿಮಾನವಿರಬೇಕು ಎಂದು ಅಭಿಪ್ರಾಯಪಟ್ಟರು. 
 
ನಾನು ಕೇವಲ ಹಿಂದಿ ಭಾಷೆಯ ಬಗ್ಗೆ ಮಾತನಾಡುತ್ತಿಲ್ಲ. ಭಾರತದಲ್ಲಿರುವ ಎಲ್ಲಾ ಭಾಷೆಗಳ ಬಗ್ಗೆ ಮಾತನಾಡುತ್ತಿದ್ದೇನೆ. ಖಾಲಿ ಅಂಗ್ರೇಜ್ ನಹಿ ಬನೋ ಪಹೇಲೆ ಭಾರತೀಯ ಬನೋ ಎಂದು ಕರೆ ನೀಡಿದರು.  
 
ಇಂದಿನ ಕಾಲದಲ್ಲಿ ಮಕ್ಕಳು ತಮ್ಮ ತಂದೆ ತಾಯಿಗಳಿಗೆ ಪರಿಪೂರ್ಣವಾಗಿ ಅಭಿನಂಧಿಸುವುದಿಲ್ಲ. ಕೇವಲ ಹಾಯ್, ಬೈ ಎಂದು ಹೇಳುತ್ತಿರುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಷಾದ ವ್ಯಕ್ತಪಡಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments