ಕಾಮೆಂಟ್ ಮಾಡಲ್ಲ ಎನ್ನುತ್ತಲೇ ಎದುರಾಳಿಗಳಿಗೆ ಟಾಂಗ್ ಕೊಟ್ಟ ಡಾ ಸಿಎನ್ ಮಂಜುನಾಥ್

Krishnaveni K
ಭಾನುವಾರ, 24 ಮಾರ್ಚ್ 2024 (10:05 IST)
Photo Courtesy: Twitter
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಇದೀಗ ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಅವರಿಗೆ ಪೈಪೋಟಿ ನೀಡಲು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷ ಡಾ ಸಿಎನ್ ಮಂಜುನಾಥ್ ಅವರಂತಹ ಕಳಂಕರಹಿತ, ಜನಪ್ರಿಯ ವ್ಯಕ್ತಿಯನ್ನು ಕಣಕ್ಕಿಳಿಸಿದೆ.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಅಳಿಯ ಎಂಬ ಕಾರಣಕ್ಕೆ ಡಾ ಸಿಎನ್ ಮಂಜುನಾಥ್ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ವ್ಯಂಗ್ಯ ಮಾಡಿತ್ತು. ಇದು ಕುಟುಂಬ ರಾಜಕಾರಣ ಎಂದು ಆರೋಪಿಸಿತ್ತು. ಇದಕ್ಕೀಗ ತಿರುಗೇಟು ನೀಡಿರುವ ಮಂಜುನಾಥ್ ಕುಟುಂಬ ರಾಜಕಾರಣ ಎನ್ನುವ ಆರೋಪ ಈಗ ರಾಜ್ಯ, ದೇಶ ರಾಜಕಾರಣದಲ್ಲಿ ಅಪ್ರಸ್ತುತ. ಯಾಕೆಂದರೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ನೋಡಿದರೆ ಮಗ-ಸೊಸೆ, ಅಳಿಯ-ಮಗಳು, ಅಣ್ಣ ಎಲ್ಲರೂ ಇದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.

ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾದಾಗ ನಾನು ಯಾರ ವಿರುದ್ಧವೂ ಟೀಕೆ ಮಾಡಲ್ಲ ಎಂದಿದ್ದರು. ಆದರೆ ಈಗ ತಮ್ಮ ವಿರುದ್ಧ ಟೀಕೆ ಮಾಡಿದವರಿಗೆ ತಿರುಗೇಟು ನೀಡಲು ಡಾ ಮಂಜುನಾಥ್ ಹಿಂದೆ ಮುಂದೆ ನೋಡಿಲ್ಲ. ಅಲ್ಲದೆ, ಇದು ಧರ್ಮ-ಅಧರ್ಮದ ನಡುವಿನ ಚುನಾವಣೆ ಎಂಬ ಕಾಂಗ್ರೆಸ್ ವ್ಯಾಖ್ಯಾನದ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದಿದ್ದಾರೆ. ಚುನಾವಣೆ ಆರೋಗ್ಯಕರವಾಗಿರಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments