Webdunia - Bharat's app for daily news and videos

Install App

ದ್ರಾವಿಡ್ ಅವರ ಅಪ್ಪಟ ಅಭಿಮಾನಿ: ಈಗಿನವರಲ್ಲಿ ಬೂಮ್ರಾ, ಕೊಹ್ಲಿ ಇಷ್ಟ ಎಂದ ನಿವೃತ್ತ ಸಿಜೆಐ ಚಂದ್ರಚೂಡ್

Sampriya
ಸೋಮವಾರ, 25 ನವೆಂಬರ್ 2024 (15:21 IST)
Photo Courtesy X
ನವದೆಹಲಿ: ಕ್ರಿಕೆಟ್‌ ನನ್ನ ಇಷ್ಟವಾದ ಕ್ರೀಡೆ. ಭಾರತದ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಅಪ್ಪಟ ಅಭಿಮಾನಿ ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ತಿಳಿಸಿದ್ದಾರೆ.

ನಾನು ಕೆಲಸದ ವೇಳಾಪಟ್ಟಿಗೆ ಅನುಗುಣವಾಗಿ ಸಮಯ ಸಿಕ್ಕಾಗ ಸಾಧ್ಯವಾದಷ್ಟು ಕ್ರಿಕೆಟ್‌ ನೋಡಲು ಬಯಸುತ್ತೇನೆ. ಅದರಲ್ಲೂ ವಿಶೇಷವಾಗಿ ಭಾರತ ತಂಡದ ಆಟವನ್ನು ನೋಡಲು ಪ್ರಯತ್ನಿಸುತ್ತೇನೆ. ಪ್ರಸ್ತುತ ಆಟಗಾರರಲ್ಲಿ ಜಸ್​ಪ್ರೀತ್​ ಬೂಮ್ರಾ, ವಿರಾಟ್ ಕೊಹ್ಲಿ ಅವರೆಂದರೆ ನನಗೆ‌ ಅಚ್ಚುಮೆಚ್ಚು ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ನನಗೆ ಕ್ರಿಕೆಟ್ ಆಡಲು ಸಮಯ ಸಿಗುತ್ತಿಲ್ಲ. ಅಲ್ಲದೆ, ನನಗೂ ಸ್ವಲ್ಪ ವಯಸ್ಸಾಗಿದೆ. ಮೊಬೈಲ್‌ನಲ್ಲಿ ಪಂದ್ಯದ ಲೈವ್‌ ವೀಕ್ಷಿಸಲು ಇದುವರೆಗೆ ಸಾಧ್ಯವಾಗಿಲ್ಲ. ಆದರೆ, ಐದರಿಂದ ಏಳು ನಿಮಿಷಗಳ ಹೈಲೈಟ್ಸ್‌ ವಿಡಿಯೊಗಳನ್ನು ವೀಕ್ಷಿಸುತ್ತೇನೆ ಎಂದಿದ್ದಾರೆ.

ಭಾರತ ತಂಡದ ಪಂದ್ಯವಿರುವಾಗ ವಿರಾಟ್ ಕೊಹ್ಲಿ ಹೇಗೆ ಆಡಿದ್ದಾರೆ. ರವಿಚಂದ್ರನ್ ಅಶ್ವಿನ್ ಹೇಗೆ ಬೌಲಿಂಗ್ ಮಾಡಿದ್ದಾರೆ ಅಥವಾ ಬೂಮ್ರಾ ಅವರು ಚೆನ್ನಾಗಿ ಬೌಲ್ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ತಪ್ಪದೇ ನೋಡುತ್ತೇನೆ ಎಂದು ಮುಕ್ತವಾಗಿ ಮಾತನಾಡಿದ್ದಾರೆ.

ನವೆಂಬರ್ 10ರಂದು ಡಿ.ವೈ. ಚಂದ್ರಚೂಡ್ ಅವರು ಸಿಜೆಐ ಹುದ್ದೆಯಿಂದ ನಿವೃತ್ತರಾಗಿದ್ದಾರೆ. ಬಳಿಕ ಸುಪ್ರೀಂ ಕೋರ್ಟ್‌ನ 51ನೆಯ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕರಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments