ಡ್ರೈವಿಂಗ್ ಕಲಿಯುತ್ತಿದ್ದಾಗ ವ್ಯಕ್ತಿಯ ಮೇಲೆ ಗಾಡಿಯನ್ನು ಹರಿಸಿದ!

Webdunia
ಬುಧವಾರ, 29 ಡಿಸೆಂಬರ್ 2021 (07:18 IST)
ಕೋಲ್ಕತ್ತಾ : ಡ್ರೈವಿಂಗ್ ಕಲಿಯುತ್ತಿದ್ದ ಮಾಜಿ ಪೊಲೀಸ್ ಅಧಿಕಾರಿಯೊಬ್ಬ ಚಾಲನೆಯ ಸಮಯದಲ್ಲಿ ವ್ಯಕ್ತಿಯೊಬ್ಬರ ಮೇಲೆ ಗಾಡಿಯನ್ನು ಹರಿಸಿದ್ದು, ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಸೋಮವಾರ ಕೋಲ್ಕತ್ತಾದ ಗರಿಯಾ ಸಹಕಾರಿ ರಸ್ತೆಯಲ್ಲಿ ಬೆಳಗ್ಗೆ 9 ಗಂಟೆಯ ಹೊತ್ತಿಗೆ ನಡೆದಿದೆ. ಮೃತ ದುರ್ದೈವಿ ಪ್ರೊಫೆಸರ್ ಸುನಿಲ್ ಕುಮಾರ್ ಗರೈ ಮಾರುಕಟ್ಟೆಯಿಂದ ತರಕಾರಿಯನ್ನು ತರಲು ಹೋಗಿದ್ದು, ಮರಳುವಾಗ ದುರ್ಘಟನೆ ನಡೆದಿದೆ.

ವರದಿಗಳ ಪ್ರಕಾರ ಗರೈ ತಮ್ಮ ಬೈಕಿನಲ್ಲಿ ಮನೆಗೆ ತೆರಳುತ್ತಿದಾಗ ಹಿಂದಿನಿಂದ ಬಂದ ಕಾರು, ಬೈಕ್ಗೆ ಡಿಕ್ಕಿ ಹೊಡೆದಿದೆ. ರಸ್ತೆಯ ಮೇಲೆ ಬಿದ್ದ ಮೇಲೆ ಕಾರು ಅವರ ಮೇಲೆಯೇ ಹರಿದುಕೊಂಡು ಹೋಗಿದೆ. 

ಗರೈಗೆ ಡಿಕ್ಕಿ ಹೊಡೆದ ಕಾರು ಮಧ್ಯಮ ಹಂತದ ಮಾಜಿ ಪೊಲೀಸ್ ಅಧಿಕಾರಿ ಓಡಿಸುತ್ತಿದ್ದು, ಅಪಘಾತದ ಸಮಯದಲ್ಲಿ ಕಾರು ಚಾಲನೆಯನ್ನು ಕಲಿಯುತ್ತಿದ್ದರು ಎನ್ನಲಾಗಿದೆ. ಗರೈ ಅವರ ಬೈಕ್ ಎದುರುಗಡೆ ಇದ್ದುದನ್ನು ಕಂಡು ಗಾಬರಿಗೊಳಗಾದ ಆರೋಪಿ ಗೊಂದಲದಲ್ಲಿ ಬ್ರೇಕ್ ಹಾಕುವ ಬದಲು ಆಕ್ಸಿಲೆಟರ್ ಒತ್ತಿದ್ದು, ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೋ ಹಿಡಿದ ಬಿವೈ ವಿಜಯೇಂದ್ರ

ವಿದೇಶ ಪ್ರವಾಸ ಮೇಲೆ ಹೆಚ್ಚುವರಿ ತೆರಿಗೆನಾ: ಪ್ರಧಾನಿ ಮೋದಿ ಗರಂ

ಢಿಕ್ಕಿ ಹೊಡೆದಿದ್ಯಾಕೆ ಎಂದು ಕೆನ್ನೆಗೆ ಹೊಡೆದ ಯುವತಿ: ಯುವಕ ಮಾಡಿದ್ದೇನು ನೋಡಿ Video

Karnataka Weather: ವಾರಂತ್ಯಕ್ಕೆ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಮುಂದಿನ ಸುದ್ದಿ
Show comments