ಮದ್ಯದ ಅಮಲಿನಲ್ಲಿ ಚಾಲನೆ: ಶಾಲಾ ಬಸ್ ಮಗುಚಿ 5 ಮಕ್ಕಳು ದುರ್ಮರಣ

Sampriya
ಗುರುವಾರ, 11 ಏಪ್ರಿಲ್ 2024 (16:47 IST)
Photo Courtesy X
ಮಹೇಂದ್ರಗಢ: ಹರಿಯಾಣದ ಮಹೇಂದ್ರಗಢ ಜಿಲ್ಲೆಯ ಕನಿನಾ ಪಟ್ಟಣದಲ್ಲಿ ಗುರುವಾರ ಖಾಸಗಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಹಾಲ್ ಆಸ್ಪತ್ರೆಯ ವೈದ್ಯ ಡಾ ರವಿ ಕೌಶಿಕ್ ಪ್ರತಿಕ್ರಿಯಿಸಿ, ಐವರು  ವಿದ್ಯಾರ್ಥಿಗಳನ್ನು ಕರೆತರಲಾಯಿತು, ಅದರಲ್ಲಿ ಒಬ್ಬ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ. ಗಾಯಗೊಂಡ 15 ವಿದ್ಯಾರ್ಥಿಗಳನ್ನು ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕ ಕುಡಿದ ಅಮಲಿನಲ್ಲಿ ಬಸ್ ಚಾಲನೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಘಟನೆಯ ಮಾಹಿತಿ ಪಡೆದ ನಂತರ, ನಾವು ಸ್ಥಳಕ್ಕೆ ತಲುಪಿದ್ದೇವೆ. ಚಾಲಕ ಮದ್ಯಪಾನ ಮಾಡಿರುವು ತಿಳಿದುಬಂದಿದೆ. ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಮಹೇಂದ್ರಗಢ ಸ್ಟೇಷನ್ ಹೌಸ್ ಆಫೀಸರ್ ಉದಯ್ ಭಾನ್ ಹೇಳಿದರು.

ಬಸ್ ಅತಿವೇಗದಿಂದ ಬಂದು ಕಾಲುವೆಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.

"ಚಾಲಕ ಪಾನಮತ್ತನಾಗಿದ್ದರಿಂದ ಬಸ್ ಅತಿವೇಗದ ಚಾಲನೆಯಾಗಿತ್ತು. ಚಾಲಕ ತಿರುವು ಪಡೆಯಲು ಯತ್ನಿಸಿದ ಕೂಡಲೇ ಬಸ್ ಕಾಲುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಸ್ಸಿನಲ್ಲಿ 50 ವಿದ್ಯಾರ್ಥಿಗಳಿದ್ದರು" ಎಂದು ವಿದ್ಯಾರ್ಥಿ ಪೊಲೀಸರಿಗೆ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments