Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಟೋಗೆ ಡಿಕ್ಕಿ: ಅಟೋ ಚಾಲಕನ ಸಾವು

Webdunia
ಸೋಮವಾರ, 19 ಸೆಪ್ಟಂಬರ್ 2016 (17:01 IST)
ಕಾನೂನು ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ನಿಂತಿದ್ದ ಅಟೋಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಒಬ್ಬ ಅಟೋ ಚಾಲಕ ಸಾವನ್ನಪ್ಪಿದ್ದಲ್ಲದೇ ಇತರ ಕೆಲವವರು ಗಾಯಗೊಂಡ ಘಟನೆ ವರದಿಯಾಗಿದೆ.
 
ಇಂದು ಬೆಳಗಿನ ಜಾವ 3.30ರ ಸುಮಾರಿಗೆ 22 ವರ್ಷ ವಯಸ್ಸಿನ ಕಾನೂನು ವಿದ್ಯಾರ್ಥಿಯಾದ ವಿಕಾಸ್ ವಿಜಯಾನಂದ್, ಕಾರಿನ ಮೇಲಿನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಅಟೋಗಳಿಗೆ ಡಿಕ್ಕಿಹೊಡೆದ ಘಟನೆ ವರದಿಯಾಗಿದೆ.  
 
ಅಟೋ ಚಾಲಕರು ತಮ್ಮ ತಮ್ಮ ಅಟೋದೊಳಗೆ ನಿದ್ರಾವಸ್ಥೆಯಲ್ಲಿದ್ದಾಗ, ಅಟೋಗಳಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ವಾಹನದಲ್ಲಿ ಮಲಗಿದ್ದ ಅಟೋ ಚಾಲಕನೊಬ್ಬ ಮೃತನಾಗಿದ್ದಾನೆ.
 
ವರದಿಗಳ ಪ್ರಕಾರ, ವಿಕಾಸ್ ಸುಪ್ರೀಂಕೋರ್ಟ್ ವಕೀಲ ವಿಜಯ್ ಆನಂದ್ ಅವರ ಪುತ್ರ ಎನ್ನಲಾಗಿದೆ. 
 
ವಿಕಾಸ್ ತನ್ನ ಗೆಳೆಯ ಮಾಜಿ ಕ್ರಿಕೆಟಿಗನ ಸಹೋದರನೊಂದಿಗೆ ಚೆಪಾಕ್‌ನಲ್ಲಿ ಪಾರ್ಟಿ ಮಾಡಿ ಮರಳಿ ಬರುತ್ತಿರುವಾಗ ಘಟನೆ ಸಂಭವಿಸಿದ್ದು, ಕಾರಿಗೆ ಏರ್‌‍ಬ್ಯಾಗ್‌ಗಳನ್ನು ಅಳವಡಿಸಿದ್ದರಿಂದ ಗಾಯಗೊಳ್ಳದೆ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪೊಲೀಸರು ವಿಕಾಸ್ ವಿಜಯಾನಂದ್‌ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಮುಂದಿನ ಸುದ್ದಿ
Show comments