Webdunia - Bharat's app for daily news and videos

Install App

ನಿನ್ನೆ ಆತಂಕ ಸೃಷ್ಟಿಸಿದ್ದ ದಸರಾ ಆನೆಗಳು ಇಂದು ತಾಲೀಮಿನಲ್ಲಿ ಫುಲ್ ಸೈಲೆಟ್‌

Sampriya
ಶನಿವಾರ, 21 ಸೆಪ್ಟಂಬರ್ 2024 (23:20 IST)
Photo Courtesy X
ಮೈಸೂರು: ಇಂದು ಬೆಳಿಗ್ಗೆ ಮತ್ತು ಸಂಜೆ ನಡೆದ ತಾಲೀಮಿನಲ್ಲಿ ನಿನ್ನೆ ಮೈಸೂರು, ಊಟಿ ರಸ್ತೆಯಲ್ಲಿ ಓಡಾಟ ಮಾಡಿ ಆತಂಕ ಸೃಷ್ಟಿಸಿದ್ದ ಧನಂಜಯ ಹಾಗೂ ಕಂಜನ್ ಆನೆಗಳು ಭಾಗವಹಿಸಿದ್ದವು.  'ವರಲಕ್ಷ್ಮಿ' ಆನೆ ಬಿಟ್ಟು ಉಳಿದ 13 ಆನೆಗಳಿಗೂ ತಾಲೀಮು ನೀಡಲಾಯಿತು.

ಶುಕ್ರವಾರ ರಾತ್ರಿ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ಗೇಟ್‌ನಲ್ಲಿ ಬ್ಯಾರಿಕೇಡ್‌ ತಳ್ಳಿ ಹೊರಬಂದು ರಸ್ತೆಯಲ್ಲಿ ಅಡ್ಡದಿಡ್ಡಿ ಓಡಾಟ ಮಾಡಿ ಆತಂಕ ಸೃಷ್ಟಿಸಿತ್ತು.  ರಾತ್ರಿ ಊಟದ ಸಮಯದಲ್ಲಿ  ಎರಡೂ ಆನೆಗಳು ಜಗಳವಾಡಿದ್ದರಿಂದ ಅವುಗಳನ್ನು ಮಾವುತರು ಹಾಗೂ ಕಾವಾಡಿಗಳು ಅರಮನೆ ಆವರಣದೊಳಗೆ ನಿಯಂತ್ರಿಸುವುದು ಸಾಧ್ಯವಾಗಿರಲಿಲ್ಲ.

ಧನಂಜಯ ಆನೆಯು ಕಂಜನ್‌ ಆನೆಯನ್ನು ಅಟ್ಟಾಡಿಸಿಕೊಂಡು ಬಂದಿತ್ತು. ಕಂಜನ್‌ ಘೀಳಿಡುತ್ತಾ ರಸ್ತೆಗೆ ಬಂದಿದ್ದ. ರಾತ್ರಿ ವೇಳೆ ಹೆಚ್ಚಿನ ವಾಹನಗಳು ಹಾಗೂ ಜನರಿಲ್ಲದ ಕಾರಣ ದೊಡ್ಡ ಅವಘಡ ತಪ್ಪಿದೆ. ನಂತರ ಮಾವುತ ಹಾಗೂ ಕಾವಾಡಿಗಳು ಕೆಲವೇ ಹೊತ್ತಿನಲ್ಲಿ ಅವುಗಳನ್ನು ನಿಯಂತ್ರಿಸಿದರು.

ಆನೆಗಳ ವರ್ತನೆಗೆ ಏನು ಕಾರಣವೆಂಬುದು ಯಾರಿಗೂ ಗೊತ್ತಾಗಿಲ್ಲ. ಸದ್ಯ ಹಾನಿಯಾಗಿಲ್ಲ. ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments