Select Your Language

Notifications

webdunia
webdunia
webdunia
webdunia

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡಬೇಡ ಎಂದಿದ್ದಕ್ಕೆ ಚಾಲಕನ ಕೊಲೆ!

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡಬೇಡ ಎಂದಿದ್ದಕ್ಕೆ ಚಾಲಕನ ಕೊಲೆ!
NewDelhi , ಸೋಮವಾರ, 29 ಮೇ 2017 (12:26 IST)
ನವದೆಹಲಿ: ನರೇಂದ್ರ ಮೋದಿ ಸ್ವಚ್ಛ ಭಾರತದ ಬಗ್ಗೆ ದೇಶದ ಯುವಕರಿಗೆ ಕರೆ ಕೊಟ್ಟಿದ್ದನ್ನು ಚಾಚೂ ತಪ್ಪದೇ ಪಾಲಿಸಲು ಹೋದ ಈ ಯುವಕ ಕೊಲೆಯಾಗಿ ಹೋಗಿದ್ದಾನೆ. ಇದು ದೆಹಲಿಯ ಇ-ರಿಕ್ಷಾ ಚಾಲಕನ ದಯನೀಯ ಕತೆ.

 
ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡಲು ಹೊರಟಿದ್ದವರನ್ನು ತಡೆದ ರಿಕ್ಷಾ ಚಾಲಕ ರವೀಂದ್ರ ಕುಮಾರ್ ಚೆನ್ನಾಗಿ ಒದೆ ತಿಂದು ನಂತರ ಸಾವನ್ನಪ್ಪಿದ್ದಾನೆ. ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ವೆಂಕಯ್ಯನಾಯ್ಡು ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿ ಮೆಟ್ರೋ ನಿಲ್ದಾಣದ ಬಳಿ ಅನತಿ ದೂರದಲ್ಲೇ ಸುಲಭ್ ಶೌಚಾಲಯವಿದ್ದರೂ, ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡಲು ಹೊರಟ ಆರೋಪಿಗಳನ್ನು ರವೀಂದ್ರ ಕುಮಾರ್ ತಡೆದಿದ್ದರು. ಇದರಿಂದ ಕೋಪಗೊಂಡ ಆರೋಪಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಟ್ವಿಟರ್ ಗೆ ರಾಮ ಗೋಪಾಲ್ ವರ್ಮಾ ಗುಡ್ ಬೈ