Select Your Language

Notifications

webdunia
webdunia
webdunia
webdunia

ಕೇಜ್ರಿದಾಯ್ತು, ಮತ್ತೀಗ ಪರಿಕ್ಕರ್‌‌ ಪಜೀತಿ

EC
ನವದೆಲಹಲಿ , ಗುರುವಾರ, 2 ಫೆಬ್ರವರಿ 2017 (09:17 IST)
ಕೇಜ್ರಿವಾಲ್ ಅವರದಾಯ್ತು, ಮತ್ತೀಗ ಕೇಂದ್ರ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಸರದಿ. ಗೋವಾದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಲಂಚ ಪಡೆಯುವಂತೆ ಕುಮ್ಮಕ್ಕು ನೀಡಿದ್ದ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. 
 

 
ರ‍್ಯಾಲಿಗಳಲ್ಲಿ ಭಾಗವಹಿಸಲು, ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಹಣ ಪಡೆಯುವುದರಲ್ಲಿ ಯಾವುದೇ ತಪ್ಪಿಲ್ಲ. ಇತರರಿಂದ ಹಣ ಪಡೆಯಿರಿ, ಆದರೆ ಕಮಲಕ್ಕೆ ಮತ ನೀಡಿ ಎಂದು ಹೇಳುವ ಮೂಲಕ ಪರಿಕ್ಕರ್ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
 
ಹೀಗೆ ಹೇಳುವ ಮೂಲಕ ಪರಿಕ್ಕರ್  ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಗೋವಾ ಫಾರ್ವರ್ಡ್ ಪಕ್ಷ ರಾಜ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿತ್ತು. 
 
ಈ ದೂರನ್ನು ಪರಗಣಿಸಿರುವ ಚುನಾವಣಾ ಆಯೋಗ ನಿಮ್ಮ ವಿರುದ್ಧ ಕ್ರಮವನ್ನೇಕೆ ಕೈಗೊಳ್ಳಬಾರದು ಎಂದು ಪರಿಕ್ಕರ್ ಅವರಿಗೆ ಪ್ರಶ್ನಿಸಿದ್ದು ಫೆಬ್ರವರಿ 3ರೊಳಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ. 
 
ಕೆಲ ದಿನಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಸಹ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು, "ಬಿಜೆಪಿ, ಕಾಂಗ್ರೆಸ್ ಎಷ್ಟೇ ದುಡ್ಡು ಕೊಟ್ಟರೂ ತೆಗೆದುಕೊಳ್ಳಿ. ಹೊಸ ನೋಟನ್ನು ಮಾತ್ರ ಸ್ವೀಕರಿಸಿ. ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು 5,000 ನೀಡಿದರೆ 10,000 ಕೇಳಿ ಪಡೆದುಕೊಳ್ಳಿ. ಆದರೆ ನಮ್ಮ ಪಕ್ಷಕ್ಕೆ ಮತ ನೀಡಿ", ಎಂದು ಅವರು ಕರೆ ಕೊಟ್ಟಿದ್ದರು. ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಚುನಾವಣಾ ಆಯೋಗ ಗೋವಾದ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಚಿನ್ನಮ್ಮನಿಗೆ ಹೊಸ ಸಂಕಷ್ಟ