Select Your Language

Notifications

webdunia
webdunia
webdunia
webdunia

ತಮಿಳುನಾಡು ರಾಜಕೀಯ ಹೈಡ್ರಾಮಾಕ್ಕೆ ತೆರೆ! ಎಡಪ್ಪಾಡಿ ಪಳನಿ ಸ್ವಾಮಿ ಸಿಎಂ

ತಮಿಳುನಾಡು ರಾಜಕೀಯ ಹೈಡ್ರಾಮಾಕ್ಕೆ ತೆರೆ! ಎಡಪ್ಪಾಡಿ ಪಳನಿ ಸ್ವಾಮಿ ಸಿಎಂ
Chennai , ಗುರುವಾರ, 16 ಫೆಬ್ರವರಿ 2017 (12:01 IST)
ಚೆನ್ನೈ: ಶಶಿಕಲಾ ಬಣದ ಎಡಪ್ಪಾಡಿ ಪಳನಿಸ್ವಾಮಿಗೆ ಸರ್ಕಾರ ರಚಿಸಲು ರಾಜ್ಯಪಾಲ ಸಿ ವಿದ್ಯಾಸಾಗರ್ ರಾವ್ ಆಹ್ವಾನ ಕೊಟ್ಟಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿದ ಪಳನಿಸ್ವಾಮಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

 
ಇದರೊಂದಿಗೆ ಐವರು ಶಾಸಕರೊಂದಿಗೆ ರಾಜಭವನಕ್ಕೆ ಬಂದ ಎಡಪ್ಪಾಡಿಗೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ಕೊಟ್ಟಿದ್ದಾರೆ. ಇದರೊಂದಿಗೆ ತಮಿಳುನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರಾಜಕೀಯ ಹೈ ಡ್ರಾಮಾಕ್ಕೆ ತೆರೆ ಬಿದ್ದಂತಾಗಿದೆ.

ಶಶಿಕಲಾ ನಟರಾಜನ್ ಕೊನೆಗೂ ತಾವು ಅಂದುಕೊಂಡಂತೆ ತಮ್ಮ ಬಣದ ನಾಯಕನನ್ನು ಮುಖ್ಯಮಂತ್ರಿ ಹುದ್ದೆಗೆ ಏರಿಸುವ ಪ್ರಯತ್ನದಲ್ಲಿ ಯಶಸ್ವಿಯಾದಂತಾಗಿದೆ. ಇಂದು ಸಂಜೆ ವೇಳೆಗೇ ಪಳನಿಸ್ವಾಮಿ ಪ್ರಮಾಣ ವಚನ ಸ್ವೀಕರಿಸುವ ಸಂಭವವಿದೆ ಎಂದು ರಾಜಭವನದ ಮೂಲಗಳು ಹೇಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅದ್ದೂರಿ ಮದುವೆಗಳಿಗೆ ಬೀಳಲಿದೆ ಬ್ರೇಕ್?