Webdunia - Bharat's app for daily news and videos

Install App

ಸುದ್ದಿವಾಹಿನಿ ನಿಷೇಧ; ತುರ್ತು ಪರಿಸ್ಥಿತಿ ದಿನ ನೆನಪಿಸುತ್ತದೆ ಎಂದ ಸಂಪಾದಕರ ಸಂಘ

Webdunia
ಶನಿವಾರ, 5 ನವೆಂಬರ್ 2016 (15:12 IST)
ಸುದ್ದಿವಾಹಿನಿ ಎನ್‌ಡಿ ಟಿವಿ ಮೇಲೆ ನವೆಂಬರ್ 9 ರಂದು 24ಗಂಟೆಗಳ ನಿಷೇಧ ಹೇರಿರುವುದನ್ನು ಖಂಡಿಸಿರುವ ಭಾರತೀಯ ಸಂಪಾದಕರ ಸಂಘ ಕೇಂದ್ರ  ಸರ್ಕಾರದ ಈ ಧೋರಣೆ ತುರ್ತುಪರಿಸ್ಥಿತಿ ದಿನಗಳನ್ನು ನೆನಪಿಸುತ್ತಿದೆ ಎಂದಿದೆ. 

ಸುದ್ದಿವಾಹಿನಿ ಮೇಲೆ ಒಂದು ದಿನದ ಮಟ್ಟಿಗೆ ನಿಷೇಧ ಹೇರಿರುವುದು ಮಾಧ್ಯಮ ಮತ್ತು ಭಾರತೀಯ ನಾಗರಿಕ ಸ್ವಾತಂತ್ರ್ಯದ ನೇರ ಉಲ್ಲಂಘನೆ. ಇದು ತುರ್ತು ಪರಿಸ್ಥಿತಿಯ ನೆನಪನ್ನು ಮರುಕಳಿಸಿದೆ. ತಕ್ಷಣಕ್ಕೆ ಸರ್ಕಾರ ಈ ಆದೇಶವನ್ನು ಹಿಂಪಡೆಯಬೇಕು ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ. 
 
ಪಠಾಣ್ ಕೋಟ್ ಉಗ್ರರ ದಾಳಿ ಸಂದರ್ಭದ ಸೂಕ್ಷ್ಮ ವಿಚಾರಗಳನ್ನು ಬಿತ್ತರಿಸಿ, ಪ್ರಸಾರ ನಿಯಮ ಉಲ್ಲಂಘಿಸಿದ ಆರೋಪದಡಿ ನವೆಂಬರ್ 9ರ ಮಧ್ಯರಾತ್ರಿಯಿಂದ ನವೆಂಬರ್ 10ರ ಮಧ್ಯರಾತ್ರಿಯವರೆಗೆ 24ಗಂಟೆ ಯಾವುದೇ ಕಾರ್ಯಕ್ರಮ, ಸುದ್ದಿ ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ಎನ್‌ಡಿ ಟಿವಿಗೆ ಆದೇಶಿಸಿದೆ. 
 
ನೀವು ಬಿತ್ತರಿಸಿರುವ ಮಾಹಿತಿ ಉಗ್ರರ ಕೈಗೆ ಸಿಕ್ಕರೆ ಕೇವಲ ದೇಶದ ಭದ್ರತೆಗಷ್ಟೇ ಅಲ್ಲ, ನಾಗರಿಕರ ಮತ್ತು ಭದ್ರತಾ ಸಿಬ್ಬಂದಿ ಜೀವಕ್ಕೂ ಹಾನಿ ತಲುಪಿಸುವಂತದ್ದು ಎಂದು ಕೇಂದ್ರ ಸುದ್ದಿ ವಾಹಿನಿಗೆ ಹೇಳಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Gold Price today: ಮತ್ತೆ ಲಕ್ಷದತ್ತ ಚಿನ್ನದ ದರ

Glance AI App: ಆನ್ ಲೈನ್ ನಲ್ಲಿ ಡ್ರೆಸ್ ಖರೀದಿಸುವಾಗ ಟ್ರಯಲ್ ನೋಡುವುದು ಇನ್ನು ಸುಲಭ

Ranya Rao case: ಪರಮೇಶ್ವರ್ ಸಾಮಾನ್ಯರ ಮದುವೆಗೆ ಬಂದ್ರೂ 20 ಲಕ್ಷ ಗಿಫ್ಟ್ ಕೊಡ್ತಾರಾ

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ನಾಮಕರಣವಾಗಿರುವುದರಿಂದ ಲಾಭವೇನುಮ ನಷ್ಟವೇನು

ಮುಂದಿನ ಸುದ್ದಿ
Show comments