ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದ ಉಪಾಧ್ಯಕ್ಷ ಚಾಲನ್ಗುರಾ ಝಾಹೌ ಸೇರಿದಂತೆ ಎಂಟು ಪದಾಧಿಕಾರಿಗಳನ್ನು ಪಕ್ಷದಿಂದ ಅಮಾನತ್ತುಗೊಳಿಸಲಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಸಮಿತಿಗಳನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ರಾಜ್ಯಧ್ಯಕ್ಷರಾಗಿ ಆಯ್ಕೆಯಾದ ಪ್ರೊಫೆಸರ್ ಜಾನ್. ವಿ. ಹ್ಲುನಾ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದ ಪದಾಧಿಕಾರಿಗಳನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದು, ಅಮಾನತ್ತುಗೊಳಿಸಿದ ಬಗ್ಗೆ ಬಿಜೆಪಿ ಹೈಕಮಾಂಡ್ಗೆ ವರದಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಘಟಕಗಳನ್ನು ಮತ್ತೆ ಪುನರ್ಸಂಘಟಿತವಾಗಿ ಮಾಡಲಾಗುವುದು. ಬಿಜೆಪಿ ಕಟ್ಟಾ ಬೆಂಬಲಿಗರನ್ನು ಗುರುತಿಸಿ ಮತ್ತೆ ಪದಾಧಿಕಾರಿಗಳ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಪ್ರೊಫೆಸರ್ ಜಾನ್. ವಿ. ಹ್ಲುನಾ ಹೇಳಿದ್ದಾರೆ.